ಮಂಗಳೂರು:ಸಂಗೀತ ಕಲೆ ಯನ್ನು ಬೆಳೆಸಲು ಪ್ರತಿಯೊಬ್ಬರ ಸಹಕಾರ ಅಗತ್ಯವಿದೆ ಎಂದು ಎಕ್ಸ್ಪರ್ಟ್ ಕಾಲೇಜು ಉಪಾಧ್ಯಕ್ಷೆ ಉಷಾಪ್ರಭಾ ನಾಯಕ್ ಹೇಳಿದರು.ಮಂಗಳೂರಿನ ಕಲಾ ಸಾಧನಾ ಸಂಸ್ಥೆ ವತಿಯಿಂದ ಆಯೋಜಿಸಲಾದ ಸ್ವರಾನುಬಂಧ ಸಂಗೀತ ಉತ್ಸವ ಉದ್ಘಾಟಿಸಿ ಅವರು ಮಾತನಾಡಿದರು.ಕಲಾವಿದರಿಗೆ ಸನ್ಮಾನ ನೆರವೇರಿಸಿ
ಅದಾನಿ ಸಮೂಹ ಸಂಸ್ಥೆಗಳ ಅಧ್ಯಕ್ಷ ಕಿಶೋರ್ ಆಳ್ವ ಮಾತನಾಡಿದರು. ಎಂ ಆರ್ ಪಿ ಎಲ್ ಕಂಪನಿ ಗ್ರೂಪ್ ಜನರಲ್ ಮ್ಯಾನೇಜರ್ ಕೃಷ್ಣ ಹೆಗ್ಡೆ, ಕಾರ್ದೋಲೈಟ್ ಸ್ಪೆಷಲಿಟಿ ಕೆಮಿಕಲ್ಸ್ ಪ್ರೈವೇಟ್ ಲಿಮಿಟೆಡ್ ಜನರಲ್ ಮ್ಯಾನೇಜರ್ ದಿವಾಕರ್. ಕೆ,ಮಂಗಳೂರು ಸ್ಮಾರ್ಟ್ ಸಿಟಿ ಜನರಲ್ ಮ್ಯಾನೇಜರ್ ಅರುಣಾ ಪ್ರಭಾ, ಮಂಗಳೂರು ಪ್ರೆಸ್ ಕ್ಲಬ್ ಅಧ್ಯಕ್ಷ ಪಿ ಬಿ ಹರೀಶ್ ರೈ, ಕಲಾ ಸಾಧನಾ ಸಂಸ್ಥೆ ನಿರ್ದೇಶಕಿ ವಿಭಾ ಶ್ರೀನಿವಾಸ್ ನಾಯಕ್, ಸಂಸ್ಥೆ ಗೌರವ ಸಲಹೆಗಾರ ಶ್ರೀನಿವಾಸ್ ನಾಯಕ್ ಇಂದಾಜೆ ಉಪಸ್ಥಿತರಿದ್ದರು. ಭಾಸ್ಕರ್ ರೈ ಕಟ್ಟಾ ಸ್ವಾಗತಿಸಿದರು. ಪುಷ್ಪರಾಜ್ ಬಿ ಎನ್ ವಂದಿಸಿದರು. ಆಕಾಂಕ್ಷ ಶ್ರೀಶ ನಾಯಕ್ ವಂದಿಸಿದರು.
ಅಂತಾರಾಷ್ಟ್ರೀಯ ಖ್ಯಾತಿಯ ಕಲಾವಿದರಾದ ಉಸ್ತಾದ್ ರಫೀಕ್ ಖಾನ್, ಪಂಡಿತ್ ರಾಜೇಂದ್ರ ನಾಕೋಡ್ ಹಾಗೂ ಪಂಡಿತ್ ಸಮೀರ್ ರಾವ್ ಅವರನ್ನು ಸನ್ಮಾನಿಸಲಾಯಿತು. ಬಳಿಕ ನಡೆದ ಜುಗಲ್ ಬಂಧಿ ಕಾರ್ಯಕ್ರಮ ಜನಮನ ಸೂರೆಗೊಳಿಸಿತ್ತು.












