ಮಂಗಳೂರು;ನಗರದ ನವ ಭಾರತ್ ಸರ್ಕಲ್ ಬಳಿಯಿರುವ ಓಶಿಯನ್ ಪರ್ಲ್ ಸಭಾಂಗಣದಲ್ಲಿ ಜನವರಿ 10 ರಂದು ಶನಿವಾರ ಮಧ್ಯಾಹ್ನ 3ರಿಂದ ರಾತ್ರಿ 8 ಗಂಟೆಯ ವರೆಗೆ ಸ್ವರಾನುಬಂಧ ಸಂಗೀತ ಉತ್ಸವ ನಡೆಯಲಿದೆ.
ಈ ಉತ್ಸವದಲ್ಲಿ ಕಲಾಸಾಧನ ವಿದ್ಯಾರ್ಥಿಗಳಿಂದ ಸಂಗೀತ ಕಾರ್ಯಕ್ರಮ, ಬಳಿಕ
ವಿಭಾ ಎಸ್. ನಾಯಕ್ ಮಂಗಳೂರು ಅವರಿಂದ ಹಿಂದೂಸ್ತಾನಿ ಶಾಸ್ತ್ರೀಯ ಗಾಯನ ನಡೆಯಲಿದೆ.ತಬಲಾದಲ್ಲಿ ವಿಘ್ನೇಶ್ ಪ್ರಭು, ಹಾಗೂ ಹಾರ್ಮೋನಿಯಂ:ನಲ್ಲಿ ಮೇಧಾ ಜಿ. ಭಟ್ ಸಾಥ್ ನೀಡಲಿದ್ದಾರೆ.
ಸಿತಾರ್-ಕೊಳಲು-ತಬಲಾ ಜುಗಲ್ ಬಂಧಿ ಉಸ್ತಾದ್ ರಫೀಕ್ ಖಾನ್ ಮತ್ತು ಪಿ. ಸಮೀರ್ ರಾವ್ ಅವರಿಂದ ಸಿತಾರ್ ಮತ್ತು ಕೊಳಲು ಜುಗಲ್ಬಂದಿ, ಪಂ. ರಾಜೇಂದ್ರ ನಾಕೋಡ್ ಅವರೊಂದಿಗೆ ನಡೆಯಲಿದೆ.
ಯುವ ಕಲಾವಿದರಲ್ಲಿ ಸಂಗೀತದ ಕುರಿತು ಆಸಕ್ತಿ ಹೆಚ್ಚಿಸಲು ಹಾಗೂ
ಅವರಿಗೆ ವೇದಿಕೆ ಕಲ್ಪಿಸಲು ಪ್ರತೀ ವರ್ಷ ಸಂಗೀತ ಉತ್ಸವ ಆಯೋಜಿಸಲಾಗುತ್ತಿದೆ. ಇದರೊಂದಿಗೆ ಅಂತಾರಾಷ್ಟ್ರೀಯ ಖ್ಯಾತಿಯ ಕಲಾವಿದರ ಸಂಗೀತ ಕಾರ್ಯಕ್ರಮ ಆಯೋಜಿಸಲಾಗುತ್ತಿದೆ. ಭಾರತೀಯ ಹಿಂದುಸ್ಥಾನಿ ಸಂಗೀತ ಪರಂಪರೆ ಉತ್ತೇಜಿಸುವ ಉದ್ದೇಶದಿಂದ ಈ ಕಾರ್ಯಕ್ರಮ ಗಳನ್ನು ಪ್ರತೀ ವರ್ಷ ಆಯೋಜಿಸಲಾಗುತ್ತಿದೆ. ಸಂಗೀತ ಕಾರ್ಯಕ್ರಮದಲ್ಲಿ ಎಲ್ಲರಿಗೂ ಉಚಿತ ಪ್ರವೇಶ ವಿದೆ ಎಂದು ಕಲಾ ಸಾಧನ ಸಂಸ್ಥೆ ನಿರ್ದೇಶಕಿ ವಿಭಾ ನಾಯಕ್ ಪತ್ರಿಕಾ ಗೋಷ್ಠಿ ಯಲ್ಲಿ ತಿಳಿಸಿದರು.
ಪತ್ರಿಕಾಗೋಷ್ಠಿ ಯಲ್ಲಿ ಸಂಸ್ಥೆಯ ಗೌರವ ಸಲಹೆಗಾರ ಶ್ರೀನಿವಾಸ್ ನಾಯಕ್ ಇಂದಾಜೆ ಉಪಸ್ಥಿತರಿದ್ದರು.












