ಸುಳ್ಯ: ಸುಳ್ಯದ ಸ್ವರ್ಣಂ ಜ್ಯುವೆಲ್ಸ್ ವತಿಯಿಂದ ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ನೀಡಿದ 2024ನೇ ಸಾಲಿನ ಅರೆಭಾಷೆ ಅಕಾಡೆಮಿ ಗೌರವ ಪ್ರಶಸ್ತಿ ಪುರಸ್ಕೃತರಾದ ನಿವೃತ್ತ ಪ್ರಾಂಶುಪಾಲರಾದ ಕೆ.ಆರ್ ಗಂಗಾಧರ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು.ಕೆ.ಎಸ್.ಆರ್. ಟಿ.ಸಿ ಬಸ್ ನಿಲ್ದಾಣದ ಮುಂಭಾಗದ ಸೂಂತೋಡು ಎಂಪೋರಿಯಂ ಬಿಲ್ಡಿಂಗ್ನಲ್ಲಿರುವ
ಸ್ವರ್ಣಂ ಜ್ಯುವೆಲ್ಸ್ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಂಸ್ಥೆಯ ಪಾಲುದಾರರಾದ ಪ್ರವೀಣ್ ಬಿ.ಗೌಡ, ಸಂಜೀವ ಕೆ , ಲೋಕೇಶ್ , ಭವಿತ್, ಸಿಬ್ಬಂದಿಗಳಾದ ನಿತೀಶ್ ಕುಮಾರ್ , ಶೋಧನ್ ಉಪಸ್ಥಿತರಿದ್ದರು.













