ನವದೆಹಲಿ: ಭಾರತದ ಟ್ವೆಂಟಿ-20 ವಿಶ್ವಕಪ್ ಗೆಲುವಿಗೀಗ ಒಂದು ವರ್ಷ ಪೂರ್ಣಗೊಳಿಸಿದ ಸಂಭ್ರಮ. ರೋಹಿತ್ ಶರ್ಮಾ ನಾಯಕತ್ವದಲ್ಲಿ ಅಮೆರಿಕ ಹಾಗೂ ಕೆರೆಬಿಯನ್ ಆತಿಥ್ಯದಲ್ಲಿ ನಡೆದ 2024ರ ಐಸಿಸಿ ಟಿ20 ವಿಶ್ವಕಪ್ನಲ್ಲಿ ಭಾರತ ಟ್ರೋಫಿ ಜಯಿಸಿತ್ತು.ಆ ಮೂಲಕ ಟಿ20 ಕ್ರಿಕೆಟ್ನಲ್ಲಿ ಎರಡನೇ ಸಲ ಹಾಗೂ 13 ವರ್ಷಗಳ ಬಳಿಕ ವೈಟ್ ಬಾಲ್ ಕ್ರಿಕೆಟ್ನಲ್ಲಿ ವಿಶ್ವಕಪ್ ಗೆದ್ದ ಸಾಧನೆ ಮಾಡಿತ್ತು. ಭಾರತ 2007ರ ಚೊಚ್ಚಲ ಟಿ20 ಹಾಗೂ 2011ರ ಏಕದಿನ ವಿಶ್ವಕಪ್ ಜಯಿಸಿತ್ತು. ಭಾರತದ ಗೆಲುವಿನ
ರೋಚಕ ಕ್ಷಣಗಳನ್ನು ರೋಹಿತ್ ಶರ್ಮಾ ಸಂದರ್ಶನದಲ್ಲಿ ಮೆಲುಕು ಹಾಕಿದ್ದಾರೆ.ನಾವು ಕೊನೆಯದಾಗಿ 2007ರಲ್ಲಿ ಟಿ20 ವಿಶ್ವಕಪ್ ಗೆದ್ದಿದ್ದೆವು.
ದಕ್ಷಿಣ ಆಫ್ರಿಕಾ ವಿರುದ್ಧ ನಡೆದ ಫೈನಲ್ ಪಂದ್ಯದಲ್ಲಿ ಭಾರತ ಜಯ ಸಾಧಿಸಿತ್ತು. ಕೊನೆಯ ಓವರ್ನಲ್ಲಿ ಬೌಂಡರಿ ಗೆರೆಯಲ್ಲಿ ಡೇವಿಡ್ ಮಿಲ್ಲರ್ ಅವರ ಕ್ಯಾಚ್ ಅನ್ನು ಸೂರ್ಯಕುಮಾರ್ ಯಾದವ್ ಪಡೆದಿದ್ದರು.ಆದರೆ ಅದೊಂದು ಅದ್ಭುತ ಕ್ಯಾಚ್ ಆಗಿತ್ತು’ ಎಂದು ಹೇಳಿದ್ದಾರೆ.
ಈ ಮೊದಲು ಬ್ಯಾಟಿಂಗ್ನಲ್ಲಿ ಅರ್ಧಶತಕ ಗಳಿಸಿದ ವಿರಾಟ್ ಕೊಹ್ಲಿ ಅವರ ಪ್ರದರ್ಶನವನ್ನು ರೋಹಿತ್ ಕೊಂಡಾಡಿದ್ದಾರೆ. ‘ಮೂರು ವಿಕೆಟ್ಗಳನ್ನು ಬೇಗನೇ ಕಳೆದುಕೊಂಡಾಗ ನಾನು ಗಾಬರಿಯಾಗಿದ್ದೆ. ವಿರಾಟ್ ತಮ್ಮ ಜವಾಬ್ದಾರಿಯನ್ನು ಸಮರ್ಥವಾಗಿ ನಿಭಾಯಿಸಿದರು. ಇಷ್ಟು ವರ್ಷಗಳ ಕಾಲ ಆಡಿದ ಅನುಭವವು ನೆರವಿಗೆ ಬಂತು’ ಎಂದು ಹೇಳಿದರು.
‘ಬಹಳಷ್ಟು ಮಂದಿ ಅಕ್ಷರ್ ಪಟೇಲ್ ಅವರ ಇನಿಂಗ್ಸ್ ಬಗ್ಗೆಯೂ ಚರ್ಚಿಸುವುದಿಲ್ಲ. ಅಂತಹ ಒತ್ತಡದ ಪರಿಸ್ಥಿತಿಯಲ್ಲಿ ನಿರ್ಣಾಯಕ ಇನಿಂಗ್ಸ್ ಕಟ್ಟಿದರು, ಅಕ್ಷರ್, ಶಿವಂ ದುಬೆ ಹಾಗೂ ಹಾರ್ದಿಕ್ ಪಾಂಡ್ಯ ಸಹ ತಮ್ಮ ಜವಾಬ್ದಾರಿಯನ್ನು ನಿಭಾಯಿಸಿದರು’ ಎಂದು ತಿಳಿಸಿದರು.ಕೊನೆಯ ಹಂತದಲ್ಲಿ ಜಸ್ಪ್ರೀತ್ ಬೂಮ್ರಾ ಹಾಗೂ ಹಾರ್ದಿಕ್ ಪಾಂಡ್ಯ ಅವರ ಸ್ಪೆಲ್ ಭಾರತದ ಗೆಲುವಿನಲ್ಲಿ ನಿರ್ಣಾಯಕ ಪಾತ್ರ ವಹಿಸಿತ್ತು ಎಂದು ರೋಹಿತ್ ನೆನಪಿಸಿಕೊಂಡರು.