The Sullia Mirror
  • ಮುಖಪುಟ
  • ಗ್ರಾಮೀಣ
  • ನಗರ
  • ತಾಲೂಕು
  • ಜಿಲ್ಲೆ
  • ರಾಜ್ಯ
  • ದೇಶ
  • ವಿದೇಶ
  • ಅಂಕಣ
  • ಸುಳ್ಯ ಮಿರರ್‌ Exclusive
  • ಇತರ
    • ರಾಜಕೀಯ
    • ಕ್ರೀಡೆ
    • ಸಾಂಸ್ಕೃತಿಕ
The Sullia Mirror
  • ಮುಖಪುಟ
  • ಗ್ರಾಮೀಣ
  • ನಗರ
  • ತಾಲೂಕು
  • ಜಿಲ್ಲೆ
  • ರಾಜ್ಯ
  • ದೇಶ
  • ವಿದೇಶ
  • ಅಂಕಣ
  • ಸುಳ್ಯ ಮಿರರ್‌ Exclusive
  • ಇತರ
    • ರಾಜಕೀಯ
    • ಕ್ರೀಡೆ
    • ಸಾಂಸ್ಕೃತಿಕ

ಸುಳ್ಯ ತಾಲೂಕು ಸಾರ್ವಜನಿಕ ಆಸ್ಪತ್ರೆಯ ಮೂಲಭೂತ ಅಭಿವೃದ್ಧಿಗೆ 1.92 ಕೋಟಿ ಅನುದಾನ: ಆಸ್ಪತ್ರೆಗೆ ಸರಕಾರದಿಂದ ಮತ್ತೊಂದು ಆಮ್ಲಜನಕ ಘಟಕ ಮಂಜೂರು

by ದಿ ಸುಳ್ಯ ಮಿರರ್ ಸುದ್ದಿಜಾಲ October 13, 2022
by ದಿ ಸುಳ್ಯ ಮಿರರ್ ಸುದ್ದಿಜಾಲ October 13, 2022
Share this article

ಸುಳ್ಯ: ಸುಳ್ಯ ತಾಲೂಕು ಸಾರ್ವಜನಿಕ ಆಸ್ಪತ್ರೆಯ ಮೂಲಭೂತ ಅಭಿವೃದ್ಧಿಗೆ ಸರಕಾರದಿಂದ 1.92 ಕೋಟಿ ರೂ ಅನುದಾನ ಮಂಜೂರಾಗಿದೆ.ಅಲ್ಲದೆ ಸರಕಾರದ ವತಿಯಿಂದ ಆಸ್ಪತ್ರೆಗೆ ಮತ್ತೊಂದು ಆಮ್ಲಜನಕ ಘಟಕ ನಿರ್ಮಾಣವಾಗಲಿದ್ದು 28 ಲಕ್ಷರೂ ಮಂಜೂರಾಗಿದೆ. ಒಟ್ಟು 2.20 ಕೋಟಿ ವೆಚ್ಚದಲ್ಲಿ ಆಮ್ಲಜನಕ ಘಟಕ ಸೇರಿ ವಿವಿಧ ಅಭಿವೃದ್ಧಿ ಕಾಮಗಾರಿಗಳು ನಡೆಯಲಿದೆ.ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಇಂಜಿನಿಯರಿಂಗ್ ಉಪವಿಭಾಗದ‌ ಮೂಲಕ ಸರಕಾರದಿಂದ

Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement

ಎಸ್‌ಸಿ ಎಸ್‌ಪಿ ಫಂಡ್‌ನಿಂದ ಮೂಲಭೂತ ಅಭಿವೃದ್ಧಿಗೆ 1.92 ಕೋಟಿ ಅನುದಾನ ಬಂದಿದೆ. ಈ ಅನುದಾನದಲ್ಲಿ ಮುಂದಿನ ಮಾರ್ಚ್‌ಗೆ ಮುಂಚಿತವಾಗಿ ಅಭಿವೃದ್ಧಿ ಕಾರ್ಯಗಳು ಪೂರ್ಣಗೊಳ್ಳಬೇಕಾಗಿದೆ. ಈ ಕುರಿತು ಆಗಬೇಕಾದ ಮೂಲಭೂತ ಅಗತ್ಯತೆಗಳ ಬಗ್ಗೆ ಕ್ರಿಯಾ ಯೋಜನೆ ತಯಾರಿಸಲು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಇಂಜಿನಿಯರಿಂಗ್ ಉಪವಿಭಾಗದ‌ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್(ಪ್ರಭಾರ) ರಾಜೇಶ್ ರೈ, ಕಿರಿಯ ಇಂಜಿನಿಯರ್ ರಾಘವೇಂದ್ರ ಅವರು ಸುಳ್ಯ ಸರಕಾರಿ ಆಸ್ಪತ್ರೆಗೆ ಭೇಟಿ ನೀಡಿ ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿ ಹಾಗು ಜನಪ್ರತಿನಿಧಿಗಳ ಜೊತೆ ಮಾತುಕತೆ

ನಡೆಸಿದರು.ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ಹರೀಶ್ ಕಂಜಿಪಿಲಿ,ನಗರ ಪಂಚಾಯತ್ ಅಧ್ಯಕ್ಷ ವಿನಯಕುಮಾರ್ ಕಂದಡ್ಕ, ಸಾರ್ವಜನಿಕರಿಕ ಆಸ್ಪತ್ರೆಯ ಆರೋಗ್ಯ ರಕ್ಷಾ ಸಮಿತಿಯ ಸದಸ್ಯ ಸುನಿಲ್ ಕೇರ್ಪಳ ಇವರೊಂದಿಗೆ ಇಂಜಿನಿಯರ್‌ಗಳು ಚರ್ಚೆ ನಡೆಸಿದರು.1.92 ಕೋಟಿ ರೂ ಮೊತ್ತದಲ್ಲಿ ಆಸ್ಪತ್ರೆಗೆ ಸುಸಜ್ಜಿತ ಶವಾಗಾರ, ಆಸ್ಪತ್ರೆಗೆ ಬರುವ ರಸ್ತೆಯ ಅಭಿವೃದ್ಧಿ, ಡಯಾಲಿಸಿಸ್ ಕೇಂದ್ರಕ್ಕೆ ಎಸಿ ಅಳವಡಿಕೆ ಮತ್ತಿತರ ಮೂಲಭೂತ ಅಭಿವೃದ್ಧಿ ಆಗಬೇಕಾಗಿದೆ ಎಂದು ಹರೀಶ್ ಕಂಜಿಪಿಲಿ, ವಿನಯಕುಮಾರ್ ಕಂದಡ್ಕ ಹಾಗು ಸುನಿಲ್ ಕೇರ್ಪಳ ಸಲಹೆ ನೀಡಿದರು. ಚಂದ್ರಶೇಖರ ನೆಡಿಲು ಉಪಸ್ಥಿತರಿದ್ದರು. ತಾಲೂಕು ಸಾರ್ವಜನಿಕ ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿ ಡಾ.ಕರುಣಾಕರ ಕೆ.ವಿ. ಅವರೊಂದಿಗೆ ಚರ್ಚೆ ನಡೆಸಿ ಆಸ್ಪತ್ರೆಯ ಬೇಡಿಕೆಗಳ ಪಟ್ಟಿ ಪಡೆದು ಸಚಿವ ಅಂಗಾರ ಅವರಲ್ಲಿ ಚರ್ಚೆ ನಡೆಸಿ ಕ್ರಿಯಾ ಯೋಜನೆ ತಯಾರಿಸಿ ಅಭಿವೃದ್ಧಿ ಕಾಮಗಾರಿ ಆರಂಭಿಸಲಾಗುವುದು ಎಂದು ಇಂಜಿನಿಯರ್ ರಾಜೇಶ್ ರೈ ತಿಳಿಸಿದ್ದಾರೆ.

28 ಲಕ್ಷದಲ್ಲಿ ಆಮ್ಲಜನಕ ಘಟಕ ಮಂಜೂರು:
ರಾಜ್ಯದ ಎಲ್ಲಾ ತಾಲೂಕು ಆಸ್ಪತ್ರೆಗಳಿಗೆ ಸರಕಾರದಿಂದ ಆಮ್ಲಜನಕ ಘಟಕ ಮಂಜೂರಾಗಿದೆ. ಅದರಂತೆ ಸುಳ್ಯ ತಾಲೂಕು ಆಸ್ಪತ್ರೆಗೆ 28 ಲಕ್ಷ ಅನುದಾನ ಮಂಜೂರಾಗಿದೆ.ಆಮ್ಲಜನಕ ಘಟಕ ನಿರ್ಮಾಣಕ್ಕೆ ಸ್ಥಳ ಗುರುತಿಸುವಿಕೆ ಅಂತಿಮಗೊಂಡಿಲ್ಲ.6,000 ಲೀಟರ್ ಲಿಕ್ವಿಡ್ ಆಕ್ಸಿಜನ್ ಸಾಮರ್ಥ್ಯದ ಆಮ್ಲಜನಕ ಘಟಕ ನಿರ್ಮಾಣವಾಗಲಿದೆ. ಕುದುರೆಮುಖ ಕಬ್ಬಿಣದ ಅದಿರು ಕಂಪೆನಿಯ ವತಿಯಿಂದ ಸುಳ್ಯ ಸಾರ್ವಜನಿಕ ಆಸ್ಪತ್ರೆಗೆ ಆಮ್ಲಜನಕ ಘಟಕ ನಿರ್ಮಾಣಗೊಂಡಿದ್ದು ಈಗಾಗಲೇ ಕಾರ್ಯಾಚರಿಸುತಿದೆ.

ದಿ ಸುಳ್ಯ ಮಿರರ್ ಸುದ್ದಿಜಾಲ

ದಿ ಸುಳ್ಯ ಮಿರರ್‌ ಸುದ್ದಿಜಾಲ. ಇದು ನಿಮ್ಮೂರಿನ ಪ್ರತಿಬಿಂಬ. ನಮಗೆ ನ್ಯೂಸ್‌ ಕಳುಹಿಸಲು thesulliamirror@gmail.com ಅಥವಾ 9008417480 ಗೆ ವಾಟ್ಸಪ್‌ ಮಾಡಿರಿ.

previous post
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಸುಳ್ಯ ತಾಲೂಕು ಕೇಂದ್ರ ಒಕ್ಕೂಟದ ಅಧ್ಯಕ್ಷರಾಗಿ ಸುರೇಶ್ ಕಣೆಮರಡ್ಕ ಆಯ್ಕೆ
next post
ಮಹಿಳಾ ಏಷ್ಯಾಕಪ್ ಟಿ20 ಕ್ರಿಕೆಟ್: ಫೈನಲ್ ತಲುಪಿದ ಭಾರತ ತಂಡ

You may also like

ಹಿಂದುತ್ವಕ್ಕಾಗಿ, ಸಮಾಜದ ಉಳಿವಿಗಾಗಿ ಯಾವ ತ್ಯಾಗಕ್ಕೂ ಸಿದ್ಧ:ಅರುಣ್ ಕುಮಾರ್ ಪುತ್ತಿಲ:...

June 4, 2023

ಮುಂಗಾರು ಪ್ರವೇಶಕ್ಕೆ ಕ್ಷಣಗಣನೆ: ಕರಾವಳಿ, ದಕ್ಷಿಣ ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ...

June 4, 2023

ಅರೆಭಾಷೆ ರಸಾಯನ: ಐತಾರದ ಪೊಳ್ಮೆ.. ಪೂರಾ ಹೆಳ್ಮಕ್ಕಳಿಗೆ ಕೊಟ್ಟರೆ ಗಳ್ಮಕ್ಕಳಿಗೆ...

June 4, 2023

ಸರಕಾರದ ಗ್ಯಾರಂಟಿ ಯೋಜನೆ: ಯುವ ನಿಧಿ, ಅನ್ನಭಾಗ್ಯ ಯೋಜನೆಗಳ ಮಾರ್ಗಸೂಚಿ...

June 3, 2023

5 ಗ್ಯಾರಂಟಿ ಯೋಜನೆಗಳಂತಹಾ ಜನಪರ ಕಾರ್ಯಕ್ರಮ ನೀಡಲು ಕಾಂಗ್ರೆಸ್‌ನಿಂದ ಮಾತ್ರ...

June 3, 2023

ಬಾಲಸೋರ್ ರೈಲು ಅಪಘಾತ: ಮೃತರ ಸಂಖ್ಯೆ 233 ಕ್ಕೆ, 900...

June 3, 2023

ಒಡಿಶಾ ರೈಲು ದುರಂತ: ಮೃತರ ಕುಟುಂಬಕ್ಕೆ 10 ಲಕ್ಷ ರೂ.,...

June 2, 2023

ಒಡಿಶಾದ ಬಾಲಸೋರ್​​ನಲ್ಲಿ ರೈಲು ಅಪಘಾತ: 50 ಮಂದಿ ಸಾವು: 300...

June 2, 2023

ರಾಜ್ಯ ಸರಕಾರದ ಐದು ಗ್ಯಾರಂಟಿಗಳ ಅನುಷ್ಠಾನ ಹೇಗೆ.? ಷರತ್ತುಗಳು ಏನು..?...

June 2, 2023

ಐದೂ ಗ್ಯಾರಂಟಿಗಳ ಜಾರಿಗೆ ಸರ್ಕಾರ ನಿರ್ಧಾರ: ಸಿಎಂ ಸಿದ್ದರಾಮಯ್ಯ ಘೋಷಣೆ

June 2, 2023

Leave a Comment Cancel Reply

ಇತ್ತೀಚಿನ ಸುದ್ದಿಗಳು

  • ಸಿಎಸ್​ಕೆ ಸ್ಟಾರ್ ಬ್ಯಾಟರ್ ಋತುರಾಜ್ ಗಾಯಕ್ವಾಡ್​- ಉತ್ಕರ್ಷ ಪವಾರ್ ಮದುವೆ ಸಂಭ್ರಮ
  • ಕೇರಳದ ನರ್ಸ್‌ಗೆ ಒಲಿದ 45 ಕೋಟಿಯ ಅಬುಧಾಬಿ ಬಿಗ್ ಟಿಕೆಟ್ ಲಾಟರಿ ಅದೃಷ್ಟ
  • ಹಿಂದುತ್ವಕ್ಕಾಗಿ, ಸಮಾಜದ ಉಳಿವಿಗಾಗಿ ಯಾವ ತ್ಯಾಗಕ್ಕೂ ಸಿದ್ಧ:ಅರುಣ್ ಕುಮಾರ್ ಪುತ್ತಿಲ: ಲೋಕ‌ ಕಲ್ಯಾಣಾರ್ಥವಾಗಿ ಶ್ರೀ ಸತ್ಯನಾರಾಯಣ ಪೂಜೆ-ಧಾರ್ಮಿಕ ಸಭೆ
  • ಜಾಲ್ಸೂರಿಗೆ ಆಗಮಿಸಿದ ಅರುಣ್ ಕುಮಾರ್ ಪುತ್ತಿಲ: ಅದ್ದೂರಿ ಸ್ವಾಗತ- ವೈಭವದ ಮೆರವಣಿಗೆ
  • ಮಾರ್ನಿಂಗ್ ಕ್ರಿಕೆಟ್‌ ಕ್ಲಬ್ ನೂತನ ಕಚೇರಿ ಉದ್ಘಾಟನೆ

ನಮ್ಮ ಬಗ್ಗೆ

ದಿ ಸುಳ್ಯ ಮಿರರ್ ಮಾಧ್ಯಮವು ಆಧುನಿಕ ಜಗತ್ತಿನ ವೇಗಕ್ಕೆ ಅನುಗುಣವಾಗಿ ಸುದ್ದಿಗಳನ್ನು ಅತ್ಯಂತ ವೇಗವಾಗಿ ಜನರಿಗೆ ತಲುಪಿಸುವ ಡಿಜಿಟಲ್ ಮಾಧ್ಯಮವಾಗಿದೆ. ಪತ್ರಕರ್ತ ಗಂಗಾಧರ ಕಲ್ಲಪಳ್ಳಿ ನೇತೃತ್ವದಲ್ಲಿ ಕ್ರಿಯಾಶೀಲ ಮತ್ತು ವೃತ್ತಿಪರ ಪತ್ರಕರ್ತರ ತಂಡ ಸುದ್ದಿಗಳನ್ನು ಅತ್ಯಂತ ಸರಳವಾಗಿ ಮತ್ತು ವೇಗವಾಗಿ ಮನ ಮುಟ್ಟುವಂತೆ ಧನಾತ್ಮಕ ದೃಷ್ಠಿಕೋನದಲ್ಲಿ ಜನರಿಗೆ ಮುಟ್ಟಿಸುವ ಕಾರ್ಯ ಮಾಡುತ್ತಿದೆ. ಜನಪರ, ಅಭಿವೃದ್ಧಿ ಪರ, ಪಾರದರ್ಶಕ ಮತ್ತು ಧನಾತ್ಮಕ ಪತ್ರಿಕೋದ್ಯಮ ನಮ್ಮ ಗುರಿ. ಜನರ ಆಶೋತ್ತರಗಳಿಗೆ ಧ್ವನಿಯಾಗುವ, ಸಮಸ್ಯೆಗಳಿಗೆ ಕನ್ನಡಿಯಾಗುವ ಆಶಯ ನಮ್ಮದು.ಗ್ರಾಮೀಣ ಭಾಗದಿಂದ ಆರಂಭಗೊಂಡು ಅಂತಾರಾಷ್ಟ್ರೀಯ ಮಟ್ಟದವರೆಗಿನ ಸುದ್ದಿಗಳ ಸಮೃದ್ಧಿಯ ಜೊತೆಗೆ, ವಿಶೇಷ ಲೇಖನಗಳು,ಮಾನವಸಾಕ್ತ ವರದಿಗಳು, ಹಿರಿಯ ಪತ್ರಕರ್ತರ, ಬರಹಗಾರರ ಅಂಕಣಗಳು ನಮ್ಮ ಮೀಡಿಯಾದಲ್ಲಿ ಓದುಗರನ್ನು ಮುಟ್ಟಲಿದೆ.

ಸಂಪರ್ಕಿಸಿ

ನಮ್ಮನ್ನು ಹೀಗೆ ಸಂಪರ್ಕಿಸಿ:

ಇ-ಮೇಲ್ ಐಡಿ: thesulliamirror@gmail.com
ದೂರವಾಣಿ ಸಂಖ್ಯೆ: 9008417480

ನಮ್ಮೊಂದಿಗೆ ಸಂಪರ್ಕದಲ್ಲಿರಿ

Facebook Twitter Whatsapp

2023 - Sullia Mirror. Website made with 🧡 by The Web People.

NEWS UPDATES ಪಡೆಯಲು ನಮ್ಮ ಗುಂಪಿನ ಕೊಂಡಿ

NEWS UPDATES ಪಡೆಯಲು ನಮ್ಮ ಗುಂಪಿನ ಕೊಂಡಿ