ಸುಳ್ಯ: ಸುಳ್ಯದ ಶ್ರೀ ಶಾರದಾ ಪದವಿ ಪೂರ್ವ ಕಾಲೇಜಿನಲ್ಲಿ ಶಿಕ್ಷಕರ ದಿನಾಚರಣೆ ಆಚರಿಸಲಾಯಿತು. ಸಮಾರಂಭದ ಅಧ್ಯಕ್ಷತೆಯನ್ನು ಸಂಸ್ಥೆಯ ಪ್ರಾಂಶುಪಾಲರಾದ ದಯಾಮಣಿ. ಕೆ ವಹಿಸಿ ವಿದ್ಯಾರ್ಥಿಗಳ ಶ್ರೇಯೋಭಿವೃದ್ಧಿಯಲ್ಲಿ ಶಿಕ್ಷಕರ ಪಾತ್ರ ತುಂಬಾ ಇದೆ ಮತ್ತು
ಒಬ್ಬ ನೈಜ ಶಿಕ್ಷಕ ವಿದ್ಯಾರ್ಥಿಯನ್ನು ಪ್ರೀತಿಯಿಂದ ಕಾಣಬೇಕೆಂದು ಹೇಳಿದರು. ಅರ್ಥಶಾಸ್ತ್ರ ಉಪನ್ಯಾಸಕಿ ಸ್ವರ್ಣಕಲಾ.ಎ.ಎಸ್ ಮಾತನಾಡಿದರು. ವಿದ್ಯಾರ್ಥಿಗಳು ಉಪನ್ಯಾಸಕರುಗಳಿಗೆ ಸ್ಮರಿಣಿಕೆಯನ್ನು ನೀಡಿ ಗೌರವಿಸಿದರು. ವಿದ್ಯಾರ್ಥಿನಿ
ಶ್ರೇಯ ಸ್ವಾಗತಿಸಿ, ವಿದ್ಯಾರ್ಥಿನಿಯರಾದ ಶ್ರೀವಲ್ಲಿ ಮತ್ತು ತನುಜ್ಞ ಕಾರ್ಯಕ್ರಮ ನಿರೂಪಿಸಿದರು. ಶಿಕ್ಷಕರ ದಿನಾಚರಣೆಯ ಪ್ರಯುಕ್ತ ವಿದ್ಯಾರ್ಥಿಗಳು ಉಪನ್ಯಾಸಕರುಗಳಿಗೆ ವಿವಿಧ ಸ್ಪರ್ಧೆಗಳನ್ನು ಏರ್ಪಡಿಸಿ ವಿಜೇತರಿಗೆ ಬಹುಮಾನವನ್ನು ನೀಡಿ ಗೌರವಿಸಿದರು. ಸಂಸ್ಥೆಯ ಉಪನ್ಯಾಸಕ ಮತ್ತು ಬೋಧಕೇತರ ವೃಂದದವರು ಮನರಂಜನಾ ಕಾರ್ಯಕ್ರಮವನ್ನು ನೀಡಿದರು.












