The Sullia Mirror
  • ಮುಖಪುಟ
  • ಗ್ರಾಮೀಣ
  • ನಗರ
  • ತಾಲೂಕು
  • ಜಿಲ್ಲೆ
  • ರಾಜ್ಯ
  • ದೇಶ
  • ವಿದೇಶ
  • ಅಂಕಣ
  • ಸುಳ್ಯ ಮಿರರ್‌ Exclusive
  • ಇತರ
    • ರಾಜಕೀಯ
    • ಕ್ರೀಡೆ
    • ಸಾಂಸ್ಕೃತಿಕ
The Sullia Mirror
  • ಮುಖಪುಟ
  • ಗ್ರಾಮೀಣ
  • ನಗರ
  • ತಾಲೂಕು
  • ಜಿಲ್ಲೆ
  • ರಾಜ್ಯ
  • ದೇಶ
  • ವಿದೇಶ
  • ಅಂಕಣ
  • ಸುಳ್ಯ ಮಿರರ್‌ Exclusive
  • ಇತರ
    • ರಾಜಕೀಯ
    • ಕ್ರೀಡೆ
    • ಸಾಂಸ್ಕೃತಿಕ

ರುಚಿಯ ವೈವಿಧ್ಯತೆ ಸಾರಿದ ಶಿವಳ್ಳಿ ಸಂಪನ್ನದ ತಿಂಡಿ ಮೇಳ.!

by ದಿ ಸುಳ್ಯ ಮಿರರ್ ಸುದ್ದಿಜಾಲ October 10, 2022
by ದಿ ಸುಳ್ಯ ಮಿರರ್ ಸುದ್ದಿಜಾಲ October 10, 2022
Share this article

*ಗಂಗಾದರ ಕಲ್ಲಪಳ್ಳಿ.
ಸುಳ್ಯ:ತಿಂಡಿ ತಿನಿಸುಗಳಲ್ಲಿ ವೈವಿಧ್ಯತೆ ಸಾರಿದ ತಿಂಡಿ ಮೇಳವು ರುಚಿಯ ಹೊಸ ಅನುಭವವನ್ನು ಉಣ ಬಡಿಸಿತು. ಸುಳ್ಯ ತಾಲೂಕು ಶಿವಳ್ಳಿ ಸಂಪನ್ನದ ವತಿಯಿಂದ ಕಾಂತಮಂಗಲದ ಪಯಸ್ವಿನಿ ತಟದ ಶ್ರೀ ಗುರು ರಾಘವೇಂದ್ರ ಮಠದಲ್ಲಿ ನಡೆದ ತಿಂಡಿ ಮೇಳವು ಪಾಕ ಲೋಕದ ಅದ್ಭುತ ಲೋಕವನ್ನು ತೆರೆದಿಟ್ಟಿತು.ಬಿಸಿ ಬಿಸಿ ತಿಂಡಿ ತಿನಿಸುಗಳು ನೆರೆದ ನೂರಾರು ಮಂದಿಯ ಬಾಯಿಯನ್ನು ಸಿಹಿಯಾಗಿಸಿ ವೈವಿದ್ಯಮಯ ಖಾದ್ಯಗಳ ರುಚಿಯ ವಿನೂತನ ಅನುಭವ ನೀಡಿತು. ಮಳೆಗಾಲದಲ್ಲಿ ಮನೆ

Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement

ಮನೆಗಳಲ್ಲಿ ಮಾಡುವ ವೈವಿಧ್ಯಮಯ ತಿಂಡಿಗಳ ರುಚಿಗಳು ಎಲ್ಲರ ಬಾಯನ್ನೂ ಸಿಹಿಯಾಗಿಸಿ ತಮ್ಮ ಅಡುಗೆಯ ನೈಪುಣ್ಯವನ್ನು ಎಲ್ಲರಿಗೂ ತಿಳಿಸಿಕೊಡಬೇಕು ಮತ್ತು ಕಲಿಸಿ ಕೊಡಬೇಕು ಎಂಬ ಉದ್ದೇಶದಿಂದ ತಿಂಡಿ ಮೇಳವನ್ನು ಏರ್ಪಡಿಸಲಾಗಿತ್ತು. ಶಿವಳ್ಳಿ ಸಂಪನ್ನವು ಪ್ರತಿ ವರ್ಷ ತಿಂಡಿ ಮೇಳವನ್ನು ಏರ್ಪಡಿಸುವುದರ ಮೂಲಕ ಸಾರ್ವಜನಿಕರ ಬಾಯಿಗೆ ರುಚಿಯ ವೈವಿಧ್ಯತೆಯನ್ನು ಸಾರುತ್ತಾರೆ.ಈ ಬಾರಿಯ ತಿಂಡಿ ಮೇಳದಲ್ಲಿ 16 ಕೌಂಟರ್‌ಗಳಲ್ಲಿ 26 ವೈವಿಧ್ಯ ತಿಂಡಿಗಳನ್ನು ಪ್ರದರ್ಶಿಸಿ

ಬಾಯಲ್ಲಿ ನೀರೂರಿಸಿದ ಶಿವಳ್ಳಿ ಸಂಪನ್ನದ ತಿಂಡಿ ಮೇಳ

The Sullia Mirror YouTube Channel

Watch& Subscribe

ವಿತರಿಸಲಾಯಿತು. ಒಂದೊಂದು ಕೌಂಟರ್‌ನಲ್ಲಿಯೂ ಒಂದೊಂದು ಕುಟುಂಬದವರು ತಮ್ಮದೇ ಆದ ವಿಶೇಷ ತಿಂಡಿಗಳನ್ನು ಮಾಡಿ ಪ್ರದರ್ಶಿಸಿ ಉಣ ಬಡಿಸಿದರು.ಅದರ ತಯಾರಿಗೆ ಬಳಸುವ ವಸ್ತುಗಳು ಮತ್ತು ವಿಧಾನವನ್ನು ವಿವರಿಸಿ ಹೇಳುತ್ತಿದ್ದರು. ಪ್ರಾಕೃತಿಕವಾಗಿ ಸಿಗುವ ಫಲವಸ್ತುಗಳಾದ ಹಲಸು,ಬಾಳೆ ಹಣ್ಣು ಗಳಿಂದ ತಯಾರಿಸಿದ ವಿವಿಧ ಖಾದ್ಯಗಳು ಮೇಳದ ಹೈಲೈಟ್ ಆಗಿತ್ತು. ಹಲಸಿನ ಹಣ್ಣು ಮತ್ತು ಕಾಯಿಯಿಂದ ಮಾಡಲಾದ ತಿಂಡಿಗಳು, ಕರಿದ ತಿನಿಸುಗಳು , ಪಾಯಸ,ಮೆಂತೆ,ಪನ್ನೀರ್, ರೈಸ್, ಸೌತೆಕಾಯಿ ಕಡುಬು, ಹಲಸಿನ ಮೂಡೆ, ಚಟ್ನಿ, ಮಿನಿ ಬನ್ಸ್, ಪತ್ರೋಡೆ, ರವಾ ವೊಡೆ, ನಿಪ್ಪಟ್ಟು, ಬೇಸನ್ ಕೊಕ್ಕೋ ಕಡಿ, ಬನ್ಸ್ , ಖರ್ಜೂರ ರಸಾಯನ, ರಾಗಿ ಹಾಲ್ಬಾಯಿ, ಉರಿಕಡಲೆ ಲಡ್ಡು, ಸೋರೆ ಕಾಯಿ ಹಲ್ವ, ಮಸಾಲಾ ರೋಲ್, ಬನ್ಸ್ , ಚಟ್ನಿ, ಸೆವೆನ್ ಕಪ್, ಪೆಲಕಾಯಿ ಸೋಂಟೆ , ಹಪ್ಪಳ ಮುರುಕ್ ಮತ್ತಿತರರ

ತಿಂಡಿ ತಿನಿಸುಗಳು ಜನರ ಬಾಯಿಯನ್ನು ಚಪ್ಪರಿಸುವಂತೆ ಮಾಡಿತ್ತು. ಒಂದೊಂದು ಕುಟುಂಬದವರೂ ಒಂದೊಂದು ಕೌಂಟರ್‌ನಲ್ಲಿ ಬೇರೆ ಬೇರೆ ತರಹದ ತಿಂಡಿಗಳನ್ನು ಮಾಡಿ ತಮ್ಮ ಕೈಚಳಕವನ್ನು ತೋರ್ಪಡಿಸಿದರು. ತಿಂಡಿಯ ಹೆಸರನ್ನು ಮತ್ತು ತಯಾರಿಸಲು ಬಳಸುವ ವಸ್ತುಗಳ ಹೆಸರನ್ನು ಪ್ರದರ್ಶಿಸಲಾಗಿತ್ತು,ತಿಂಡಿ ಮೇಳದಲ್ಲಿ ಭಾಗವಹಿಸಿದ ಎಲ್ಲರಿಗೂ ಪ್ರಶಸ್ತಿ ಪತ್ರವನ್ನು ನೀಡಿ ಪುರಸ್ಕರಿಸಲಾಯಿತು . ಶಿವ ಸಂಪನ್ನದ ವತಿಯಿಂದ ಪ್ರತಿ ವರ್ಷವೂ ವೈವಿಧ್ಯಮಯ ತಿಂಡಿ ಮೇಳಗಳನ್ನು ಸಂಘಟಿಸಲಾಗುತ್ತದೆ.

ಮಂಗಳೂರು ವಿವಿ ಸಂಧ್ಯಾ ಕಾಲೇಜಿನ ಪ್ರಾಂಶುಪಾಲರಾದ ಡಾ.ಶುಭಾಷಿಣಿ ಹಾಗು ಶ್ರೀವತ್ಸ ತಿಂಡಿ ಮೇಳವನ್ನು ಉದ್ಘಾಟಿಸಿದರು. ಶಿವಳ್ಳಿ ಸಂಪನ್ನದ ಅಧ್ಯಕ್ಷ ಪ್ರವೀಣ್ ರಾವ್, ಬೃಂದಾವನ ಸೇವಾ ಟ್ರಸ್ಟ್‌ನ ಅಧ್ಯಕ್ಷ ಎಂ‌.ಎನ್.ಶ್ರೀಕೃಷ್ಣ ಸೋಮಯಾಗಿ, ಶಿವಳ್ಳಿ ಸಂಪನ್ನದ ಮಹಿಳಾ ಘಟಕದ ಅಧ್ಯಕ್ಷೆ ಮಮತಾ ಮೂಡಿತ್ತಾಯ, ಕಾರ್ಯದರ್ಶಿ ನವೀನ್ ಸೋಮಯಾಗಿ ಜಿಲ್ಲಾ ಕಾರ್ಯದರ್ಶಿ ಪ್ರಕಾಶ್ ಮೂಡಿತ್ತಾಯ, ವಿದ್ಯಾರ್ಥಿ ಘಟಕದ ಅಧ್ಯಕ್ಷ ಪ್ರಥಮ್ ಮೂಡಿತ್ತಾಯ ಮತ್ತಿತರರು ಉಪಸ್ಥಿತರಿದ್ದರು.

ದಿ ಸುಳ್ಯ ಮಿರರ್ ಸುದ್ದಿಜಾಲ

ದಿ ಸುಳ್ಯ ಮಿರರ್‌ ಸುದ್ದಿಜಾಲ. ಇದು ನಿಮ್ಮೂರಿನ ಪ್ರತಿಬಿಂಬ. ನಮಗೆ ನ್ಯೂಸ್‌ ಕಳುಹಿಸಲು thesulliamirror@gmail.com ಅಥವಾ 9008417480 ಗೆ ವಾಟ್ಸಪ್‌ ಮಾಡಿರಿ.

previous post
ಉತ್ತರಪ್ರದೇಶದ ಮಾಜಿ ಮುಖ್ಯಮಂತ್ರಿ ಮುಲಾಯಂ ಸಿಂಗ್ ಯಾದವ್ ನಿಧನ
next post
ಪ್ರೊ ಕಬಡ್ಡಿ: ಇಂದಿನ ಪಂದ್ಯಗಳು..!

You may also like

ತೆಕ್ಕಿಲ್ ಪ್ರತಿಷ್ಠಾನದ ವತಿಯಿಂದ ಗೃಹ ಸಚಿವ ಡಾ.ಜಿ. ಪರಮೆಶ್ವರ್ ಅವರಿಗೆ...

June 8, 2023

ಗೃಹಲಕ್ಷ್ಮಿ ಯೋಜನೆಗೆ ಮಾರ್ಗಸೂಚಿ ಬಿಡುಗಡೆ ಮಾಡಿದ ಸರಕಾರ

June 7, 2023

ಅರಬ್ಬಿ ಸಮುದ್ರದಲ್ಲಿ ‘ಬಿಪರ್ಜೋಯ್’ ಚಂಡಮಾರುತ ಸೃಷ್ಟಿ: ತೀವ್ರ ಸ್ವರೂಪ ಪಡೆಯುತ್ತಿರುವ...

June 7, 2023

ಸಂಪಾಜೆಯ ನದಿಗಳಲ್ಲಿ ತುಂಬಿದ ಹೂಳು ತೆಗೆಯುವ ಕಾರ್ಯಾಚರಣೆಗೆ ಚಾಲನೆ

June 7, 2023

ಸುಳ್ಯ ನಗರ ಪಂಚಾಯತ್ ಪರಿಸರ ಈಗ ತ್ಯಾಜ್ಯ ಮುಕ್ತ..! ನ.ಪಂ.ಸುತ್ತಲೂ...

June 6, 2023

ಡೆಂಗ್ಯೂ, ಮಲೇರಿಯಾ ಬಗ್ಗೆ ಮುನ್ನೆಚ್ಚರಿಕೆ ಇರಲಿ: ಡಾ. ಕುಮಾರ್

June 6, 2023

ನೈತಿಕ ಪೊಲೀಸ್​ಗಿರಿ ತಡೆಗೆ ‘ಆ್ಯಂಟಿ ಕಮ್ಯುನಲ್ ವಿಂಗ್’ ಸ್ಥಾಪನೆ: ಗೃಹ...

June 6, 2023

ಸಂಪಾಜೆ ಗ್ರಾಮದ ಮೂಲಭೂತ ಅಭಿವೃದ್ಧಿಗಾಗಿ ಹೋರಾಟ: ಸಂಪಾಜೆ ಮೂಲಭೂತ ಸೌಕರ್ಯಗಳ...

June 6, 2023

ಬಾಡಿಗೆ ಮನೆಯಲ್ಲಿ ವಾಸಿಸುವವರಿಗೂ ಉಚಿತ ವಿದ್ಯುತ್: ಸಿಎಂ ಸಿದ್ದರಾಮಯ್ಯ

June 6, 2023

200 ಯೂನಿಟ್ ಉಚಿತ ವಿದ್ಯುತ್ ನೀಡುವ ಗೃಹಜ್ಯೋತಿ ಯೋಜನೆಗೆ ಮಾರ್ಗಸೂಚಿ...

June 5, 2023

Leave a Comment Cancel Reply

ಇತ್ತೀಚಿನ ಸುದ್ದಿಗಳು

  • ಬಿ.ಎಸ್.ಯಡಿಯೂರಪ್ಪ ಸೇರಿ ಬಿಜೆಪಿ ರಾಜ್ಯ ಮುಖಂಡರ ಭೇಟಿಯಾದ ಶಾಸಕಿ ಭಾಗೀರಥಿ ಮುರುಳ್ಯ
  • ನಗರ ಸ್ವಚ್ಛತಾ ಅಭಿಯಾನ: ಆಲೆಟ್ಟಿ ರಸ್ತೆಯಲ್ಲಿ 37ನೇ ವಾರದ ಸ್ವಚ್ಛತಾ ಕಾರ್ಯಕ್ರಮ
  • ಹಜ್ ಯಾತ್ರಾರ್ಥಿಗಳಿಗೆ ಬೀಳ್ಕೊಡುಗೆ ಸಮಾರಂಭ
  • ತೆಕ್ಕಿಲ್ ಪ್ರತಿಷ್ಠಾನದ ವತಿಯಿಂದ ಗೃಹ ಸಚಿವ ಡಾ.ಜಿ. ಪರಮೆಶ್ವರ್ ಅವರಿಗೆ ಸನ್ಮಾನ
  • ಹನಿ‌ ಸುರಿಸಿ ಮಾಯವಾದ ವರುಣ: ಮುಂದುವರಿದ ಮಳೆಯ ಕಣ್ಣಾ ಮುಚ್ಚಾಲೆ

ನಮ್ಮ ಬಗ್ಗೆ

ದಿ ಸುಳ್ಯ ಮಿರರ್ ಮಾಧ್ಯಮವು ಆಧುನಿಕ ಜಗತ್ತಿನ ವೇಗಕ್ಕೆ ಅನುಗುಣವಾಗಿ ಸುದ್ದಿಗಳನ್ನು ಅತ್ಯಂತ ವೇಗವಾಗಿ ಜನರಿಗೆ ತಲುಪಿಸುವ ಡಿಜಿಟಲ್ ಮಾಧ್ಯಮವಾಗಿದೆ. ಪತ್ರಕರ್ತ ಗಂಗಾಧರ ಕಲ್ಲಪಳ್ಳಿ ನೇತೃತ್ವದಲ್ಲಿ ಕ್ರಿಯಾಶೀಲ ಮತ್ತು ವೃತ್ತಿಪರ ಪತ್ರಕರ್ತರ ತಂಡ ಸುದ್ದಿಗಳನ್ನು ಅತ್ಯಂತ ಸರಳವಾಗಿ ಮತ್ತು ವೇಗವಾಗಿ ಮನ ಮುಟ್ಟುವಂತೆ ಧನಾತ್ಮಕ ದೃಷ್ಠಿಕೋನದಲ್ಲಿ ಜನರಿಗೆ ಮುಟ್ಟಿಸುವ ಕಾರ್ಯ ಮಾಡುತ್ತಿದೆ. ಜನಪರ, ಅಭಿವೃದ್ಧಿ ಪರ, ಪಾರದರ್ಶಕ ಮತ್ತು ಧನಾತ್ಮಕ ಪತ್ರಿಕೋದ್ಯಮ ನಮ್ಮ ಗುರಿ. ಜನರ ಆಶೋತ್ತರಗಳಿಗೆ ಧ್ವನಿಯಾಗುವ, ಸಮಸ್ಯೆಗಳಿಗೆ ಕನ್ನಡಿಯಾಗುವ ಆಶಯ ನಮ್ಮದು.ಗ್ರಾಮೀಣ ಭಾಗದಿಂದ ಆರಂಭಗೊಂಡು ಅಂತಾರಾಷ್ಟ್ರೀಯ ಮಟ್ಟದವರೆಗಿನ ಸುದ್ದಿಗಳ ಸಮೃದ್ಧಿಯ ಜೊತೆಗೆ, ವಿಶೇಷ ಲೇಖನಗಳು,ಮಾನವಸಾಕ್ತ ವರದಿಗಳು, ಹಿರಿಯ ಪತ್ರಕರ್ತರ, ಬರಹಗಾರರ ಅಂಕಣಗಳು ನಮ್ಮ ಮೀಡಿಯಾದಲ್ಲಿ ಓದುಗರನ್ನು ಮುಟ್ಟಲಿದೆ.

ಸಂಪರ್ಕಿಸಿ

ನಮ್ಮನ್ನು ಹೀಗೆ ಸಂಪರ್ಕಿಸಿ:

ಇ-ಮೇಲ್ ಐಡಿ: thesulliamirror@gmail.com
ದೂರವಾಣಿ ಸಂಖ್ಯೆ: 9008417480

ನಮ್ಮೊಂದಿಗೆ ಸಂಪರ್ಕದಲ್ಲಿರಿ

Facebook Twitter Whatsapp

2023 - Sullia Mirror. Website made with 🧡 by The Web People.

NEWS UPDATES ಪಡೆಯಲು ನಮ್ಮ ಗುಂಪಿನ ಕೊಂಡಿ

NEWS UPDATES ಪಡೆಯಲು ನಮ್ಮ ಗುಂಪಿನ ಕೊಂಡಿ