The Sullia Mirror
  • ಮುಖಪುಟ
  • ಗ್ರಾಮೀಣ
  • ನಗರ
  • ತಾಲೂಕು
  • ಜಿಲ್ಲೆ
  • ರಾಜ್ಯ
  • ದೇಶ
  • ವಿದೇಶ
  • ಅಂಕಣ
  • ಸುಳ್ಯ ಮಿರರ್‌ Exclusive
  • ಇತರ
    • ರಾಜಕೀಯ
    • ಕ್ರೀಡೆ
    • ಸಾಂಸ್ಕೃತಿಕ
The Sullia Mirror
  • ಮುಖಪುಟ
  • ಗ್ರಾಮೀಣ
  • ನಗರ
  • ತಾಲೂಕು
  • ಜಿಲ್ಲೆ
  • ರಾಜ್ಯ
  • ದೇಶ
  • ವಿದೇಶ
  • ಅಂಕಣ
  • ಸುಳ್ಯ ಮಿರರ್‌ Exclusive
  • ಇತರ
    • ರಾಜಕೀಯ
    • ಕ್ರೀಡೆ
    • ಸಾಂಸ್ಕೃತಿಕ

ಸುಳ್ಯ ನ.ಪಂ. ಸಾಮಾನ್ಯ ಸಭೆ:ಆಡಳಿತ ವ್ಯವಸ್ಥೆ ಕುಸಿದಿದೆ- ಅಭಿವೃದ್ದಿ ಕುಂಠಿತವಾಗಿದೆ: ವಿಪಕ್ಷ ಆರೋಪ

by ದಿ ಸುಳ್ಯ ಮಿರರ್ ಸುದ್ದಿಜಾಲ October 11, 2022
by ದಿ ಸುಳ್ಯ ಮಿರರ್ ಸುದ್ದಿಜಾಲ October 11, 2022
Share this article

ಸುಳ್ಯ: ನಗರ ಪಂಚಾಯಿತಿಯಲ್ಲಿ ಪ್ರಮುಖ ಅಧಿಕಾರಿಗಳಿಲ್ಲದೇ ಹಲವು ತಿಂಗಳುಗಳಾಗಿದೆ. ಪ್ರಮುಖ ಹುದ್ದೆಗಳು ಖಾಲಿ ಇರುವುದರಿಂದ ನಗರದ ಆಡಳಿತ ಯಂತ್ರ ಸಂಪೂರ್ಣ ಕುಸಿದಿದೆ. ಸಚಿವರ ಊರಿನಲ್ಲಿ ಪ್ರಮುಖ ಅಧಿಕಾರಿಗಳೆ ಇಲ್ಲದಿದ್ದರೆ ಹೇಗೆ?. ನಗರದಲ್ಲಿ ಹಲವು ಜ್ವಲಂತ ಸಮಸ್ಯೆಗಳಿದ್ದರೂ ಸಚಿವರು ಇಚ್ಚಾಶಕ್ತಿ ತೋರಿಸುತ್ತಿಲ್ಲ ಎಂದು ನ.ಪಂ. ವಿಪಕ್ಷ ಸದಸ್ಯರು ಅರೋಪಿಸಿದ ಘಟನೆ ಸುಳ್ಯ ನಗರ ಪಂಚಾಯತ್ ಸಾಮಾನ್ಯ ಸಭೆಯಲ್ಲಿ ನಡೆಯಿತು.ನಗರ ಪಂಚಾಯಿತಿ ಅಧ್ಯಕ್ಷ ವಿನಯ ಕುಮಾರ್ ಕಂದಡ್ಕ ಅಧ್ಯಕ್ಷತೆಯಲ್ಲಿ ನಡೆದ ಸಾಮಾನ್ಯ ಸಭೆಯಲ್ಲಿ

Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement

ಮಾತನಾಡಿದ ವಿಪಕ್ಷ ಸದಸ್ಯ ಕೆ.ಎಸ್.ಉಮ್ಮರ್ ನಗರ ಕಳೆದ ಹಲವು ತಿಂಗಳಿನಿಂದ ನ.ಪಂ.ನಲ್ಲಿ ಇಂಜಿನಿಯರ್, ಆರೋಗ್ಯ ನಿರೀಕ್ಷಕ, ಕಂದಾಯ ನಿರೀಕ್ಷಕರಿಲ್ಲದೇ ಅಭಿವೃದ್ದಿ ಕೆಲಸಗಳು ಬಾಕಿ ಉಳಿದಿದೆ. 5 ಸಾಮಾನ್ಯ ಸಭೆಗಳು ಅಧಿಕಾರಿಗಳು ಇಲ್ಲದೇ ನಡೆದಿದೆ. ಕ್ರೀಯಾಯೋಜನೆ ಆಗಿ 6 ತಿಂಗಳಾದರೂ ವಾರ್ಡುಗಳಿಗೆ ಅನುದಾನ ಹಂಚಿಕೆ ಆಗಿಲ್ಲ. ಜನರಿಗೆ ಭರವಸೆ ಕೊಡುವ ಕೆಲಸ ಮಾತ್ರ ಆಗುತ್ತಿದೆ ಎಂದು ಹೇಳಿದರು.ಸದಸ್ಯ ಎಂ.ವೆಂಕಪ್ಪ ಗೌಡ ಮಾತನಾಡಿ ನಮ್ಮ ಶಾಸಕರು ಸಚಿವರಾದ ಬಳಿಕ ಅನುದಾನ ತರಲು ಹಿಂದೇಟು ಹಾಕುವ ಕಾರಣ ಸಭೆಗೆ ಬರಲು ಹಿಂದೇಟು ಹಾಕುತ್ತಿದ್ದಾರೆ. ನಗರ ಪಂಚಾಯಿತಿಯಲ್ಲಿ ಹಿರಿಯ ಸದಸ್ಯರ ಸಲಹೆಗಳಿಗೆ ಬೆಲೆ ಇಲ್ಲ. ನಗರದ ಜನರ ಅಭಿವೃದ್ದಿಗೆ ಅನುದಾನ ತನ್ನಿ. ಸಚಿವರಿಗೆ ಇಚ್ಚಾಶಕ್ತಿ ಇಲ್ಲದ ಕಾರಣ ಈ ರೀತಿ ಆಗಿದೆ ಎಂದು ಎಂದು ಹೇಳಿದರು. ಸಭೆಗೆ ಸಚಿವರು ಬರಬೇಕು ಎಂದು ಕಳೆದ ಸಾಮಾನ್ಯ ಸಭೆಯಲ್ಲಿ ವಿಪಕ್ಷ ಸದಸ್ಯರು ಕಪ್ಪುಪಟ್ಟಿ ಹಾಕಿ ಸಭೆಯಲ್ಲಿ ಕುಳಿತಿದ್ದರು. ಅಲ್ಲದೇ ಸಚಿವರು ಸಭೆಗೆ ಬರುವವರೆಗೆ ಕಪ್ಪು ಪಟ್ಟಿ ಹಾಕಿ ಸಭೆಯಲ್ಲಿ ಇರುತ್ತೇವೆ ಎಂದಿದ್ದರು. ಈ ಸಭೆಗೆ ವಿಪಕ್ಷ ಸದಸ್ಯ ಕೆ.ಎಸ್.ಉಮ್ಮರ್ ಕಪ್ಪು ಪಟ್ಟಿ ಮತ್ತು ಹೂವಿನ ಗೊಂಚಲನ್ನು ತಂದು. ಸಚಿವರು ಬಂದರೆ ಹೂ ನೀಡಿ ಸ್ವಾಗತಿಸುತ್ತೇನೆ. ಇಲ್ಲದಿದ್ದರೆ ಕಪ್ಪು ಪಟ್ಟಿ ಹಾಕಿ ಸಭೆಯಲ್ಲಿ ಭಾಗವಹಿಸುತ್ತೇನೆ ಎಂದು ಹೇಳಿದರು. ಬಳಿಕ ವಿಪಕ್ಷದ ಎಲ್ಲಾ ಸದಸ್ಯರು ಕಪ್ಪು ಪಟ್ಟಿ ಧರಿಸಿ ಸಭೆಯಲ್ಲಿ ಭಾಗವಹಿಸಿದರು.

ಬಳಿಕ ಉತ್ತರಿಸಿದ ಅಧ್ಯಕ್ಷರು ಸಚಿವರಾದ ಅಂಗಾರ ಮತ್ತು ಕೋಟಾ ಶ್ರೀನಿವಾಸ ಪೂಜಾರಿ ಅವರಲ್ಲಿ ಈಗಾಗಲೇ ಮಾತನಾಡಲಾಗಿದೆ. ಕೂಡಲೇ ಸುಳ್ಯ ನಗರದ ಸಮಸ್ಯೆಗಳನ್ನು ಚರ್ಚಿಸಲು ವಿಶೇಷ ಸಭೆ ಕರೆಯಲಾಗುವುದು ಎಂದು ಹೇಳಿದರು. ಶಾಸಕರನ್ನು ವಿಶೇಷ ಸಭೆಗಳಿಗೆ ಕರೆಯುವುದಲ್ಲ.ಸಾಮಾನ್ಯ ಸಭೆಗೆ ಕರೆಯಬೇಕು ಎಂದು ಕೆ.ಎಸ್.ಉಮ್ಮರ್ ಹೇಳಿದರು. ಕಳೆದ 8 ವರ್ಷಗಳಿಂದ ನಿವೇಶನ ರಹಿತರಿಗೆ ಭೂಮಿ ನೀಡಲು ಆಗಿಲ್ಲ. 1500 ಜನರ ಅರ್ಜಿಗಳು ನಗರ ಪಂಚಾಯಿತಿಯಲ್ಲಿ ಬಾಕಿ ಉಳಿದಿದೆ ಎಂದು ಕೆ.ಎಸ್.ಉಮ್ಮರ್ ಹೇಳಿದರು. ಇದಕ್ಕೆ ಉತ್ತರಿಸಿದ ವಿನಯ ಕುಮಾರ್ ನಗರದಲ್ಲಿ 452 ನಿವೇಶನಗಳಿಗೆ ಅರ್ಜಿಗಳು ಇದೆ. ನಗರದಲ್ಲಿ ನಿವೇಶನಗಳಿಗೆ ಜಾಗ ಗುರುತಿಸುವ ಕಾರ್ಯ ನಡೆಯುತ್ತಿದೆ. ಕೆಲವು ಕಡೆ ಅರಣ್ಯ ಇಲಾಖೆಯ ಅಡೆತಡೆಗಳಿವೆ. ಮೊದಲು ವಾರ್ಡುಗಳಲ್ಲಿ ನಿವೇಶನ ರಹಿತರ ಪಟ್ಟಿ ಮಾಡಲಾಗುವುದು ಎಂದು ಹೇಳಿದರು. ಇದಕ್ಕೆ ವಿರೋಧ ವ್ಯಕ್ತಪಡಿಸಿದ ಎಂ.ವೆಂಕಪ್ಪ ಗೌಡ ಮೊದಲು ಜಾಗ ಗುರುತು ಮಾಡಿ ಬಳಿಕ ನಿವೇಶನ ರಹಿತರ ಪಟ್ಟಿ ತಯಾರಿಸುವುದು ಸೂಕ್ತ ಎಂದು ಹೇಳಿದರು.
ಸಭೆಯಲ್ಲಿ ನ.ಪಂ. ಸ್ಥಾಯಿ ಸಮಿತಿ ಅಧ್ಯಕ್ಷೆ ಅರುಣಾ ಕುರುಂಜಿ, ಕಳೆದ ಸಾಮಾನ್ಯ ಸಭೆಯಲ್ಲಿ ಸುಧಾಕರ್. ಎಂ.ಎಚ್, ನ.ಪಂ.ಸದಸ್ಯರು, ಅದಿಕಾರಿಗಳು ಇದ್ದರು.

ದಿ ಸುಳ್ಯ ಮಿರರ್ ಸುದ್ದಿಜಾಲ

ದಿ ಸುಳ್ಯ ಮಿರರ್‌ ಸುದ್ದಿಜಾಲ. ಇದು ನಿಮ್ಮೂರಿನ ಪ್ರತಿಬಿಂಬ. ನಮಗೆ ನ್ಯೂಸ್‌ ಕಳುಹಿಸಲು thesulliamirror@gmail.com ಅಥವಾ 9008417480 ಗೆ ವಾಟ್ಸಪ್‌ ಮಾಡಿರಿ.

previous post
ವರ್ಣ ರಂಜಿತ ಶೋಭಾಯಾತ್ರೆಯೊಂದಿಗೆ ವೈಭವದ ಸುಳ್ಯ ದಸರಾ ಸಂಪನ್ನ.
next post
ಪ್ರೊ ಕಬಡ್ಡಿ:ದಬಂಗ್ ಡೆಲ್ಲಿ, ಯು ಮುಂಬಾಗೆ ಗೆಲುವು

You may also like

ಹಿಂದುತ್ವಕ್ಕಾಗಿ, ಸಮಾಜದ ಉಳಿವಿಗಾಗಿ ಯಾವ ತ್ಯಾಗಕ್ಕೂ ಸಿದ್ಧ:ಅರುಣ್ ಕುಮಾರ್ ಪುತ್ತಿಲ:...

June 4, 2023

ಮುಂಗಾರು ಪ್ರವೇಶಕ್ಕೆ ಕ್ಷಣಗಣನೆ: ಕರಾವಳಿ, ದಕ್ಷಿಣ ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ...

June 4, 2023

ಅರೆಭಾಷೆ ರಸಾಯನ: ಐತಾರದ ಪೊಳ್ಮೆ.. ಪೂರಾ ಹೆಳ್ಮಕ್ಕಳಿಗೆ ಕೊಟ್ಟರೆ ಗಳ್ಮಕ್ಕಳಿಗೆ...

June 4, 2023

ಮೊಬೈಲ್ ಗ್ಯಾರೇಜ್‌ನಲ್ಲಿ ಸ್ಮಾರ್ಟ್ ಫೋನ್ ಖರೀದಿಸಿ.. ಆಕರ್ಷಕ ಛತ್ರಿ ಉಚಿತವಾಗಿ...

June 4, 2023

ಸರಕಾರದ ಗ್ಯಾರಂಟಿ ಯೋಜನೆ: ಯುವ ನಿಧಿ, ಅನ್ನಭಾಗ್ಯ ಯೋಜನೆಗಳ ಮಾರ್ಗಸೂಚಿ...

June 3, 2023

ಎನ್ಎಸ್‌ಯುಐ ವತಿಯಿಂದ ಕೆ.ಎಸ್.ರ್.ಟಿ.ಸಿ ಬಸ್ ನಿಲ್ದಾಣದಲ್ಲಿ ಮುರಿದು ಹೋದ ಆಸನದ...

June 3, 2023

5 ಗ್ಯಾರಂಟಿ ಯೋಜನೆಗಳಂತಹಾ ಜನಪರ ಕಾರ್ಯಕ್ರಮ ನೀಡಲು ಕಾಂಗ್ರೆಸ್‌ನಿಂದ ಮಾತ್ರ...

June 3, 2023

ರೋಟರಿ ಪೂರ್ವಾಧ್ಯಕ್ಷರಿಗೆ ಗೌರವಾರ್ಪಣೆ ಹಾಗೂ ಚಾರ್ಟರ್ ನೈಟ್ ಕಾರ್ಯಕ್ರಮ.

June 3, 2023

ಬಾಲಸೋರ್ ರೈಲು ಅಪಘಾತ: ಮೃತರ ಸಂಖ್ಯೆ 233 ಕ್ಕೆ, 900...

June 3, 2023

ಒಡಿಶಾ ರೈಲು ದುರಂತ: ಮೃತರ ಕುಟುಂಬಕ್ಕೆ 10 ಲಕ್ಷ ರೂ.,...

June 2, 2023

Leave a Comment Cancel Reply

ಇತ್ತೀಚಿನ ಸುದ್ದಿಗಳು

  • ಸಿಎಸ್​ಕೆ ಸ್ಟಾರ್ ಬ್ಯಾಟರ್ ಋತುರಾಜ್ ಗಾಯಕ್ವಾಡ್​- ಉತ್ಕರ್ಷ ಪವಾರ್ ಮದುವೆ ಸಂಭ್ರಮ
  • ಕೇರಳದ ನರ್ಸ್‌ಗೆ ಒಲಿದ 45 ಕೋಟಿಯ ಅಬುಧಾಬಿ ಬಿಗ್ ಟಿಕೆಟ್ ಲಾಟರಿ ಅದೃಷ್ಟ
  • ಹಿಂದುತ್ವಕ್ಕಾಗಿ, ಸಮಾಜದ ಉಳಿವಿಗಾಗಿ ಯಾವ ತ್ಯಾಗಕ್ಕೂ ಸಿದ್ಧ:ಅರುಣ್ ಕುಮಾರ್ ಪುತ್ತಿಲ: ಲೋಕ‌ ಕಲ್ಯಾಣಾರ್ಥವಾಗಿ ಶ್ರೀ ಸತ್ಯನಾರಾಯಣ ಪೂಜೆ-ಧಾರ್ಮಿಕ ಸಭೆ
  • ಜಾಲ್ಸೂರಿಗೆ ಆಗಮಿಸಿದ ಅರುಣ್ ಕುಮಾರ್ ಪುತ್ತಿಲ: ಅದ್ದೂರಿ ಸ್ವಾಗತ- ವೈಭವದ ಮೆರವಣಿಗೆ
  • ಮಾರ್ನಿಂಗ್ ಕ್ರಿಕೆಟ್‌ ಕ್ಲಬ್ ನೂತನ ಕಚೇರಿ ಉದ್ಘಾಟನೆ

ನಮ್ಮ ಬಗ್ಗೆ

ದಿ ಸುಳ್ಯ ಮಿರರ್ ಮಾಧ್ಯಮವು ಆಧುನಿಕ ಜಗತ್ತಿನ ವೇಗಕ್ಕೆ ಅನುಗುಣವಾಗಿ ಸುದ್ದಿಗಳನ್ನು ಅತ್ಯಂತ ವೇಗವಾಗಿ ಜನರಿಗೆ ತಲುಪಿಸುವ ಡಿಜಿಟಲ್ ಮಾಧ್ಯಮವಾಗಿದೆ. ಪತ್ರಕರ್ತ ಗಂಗಾಧರ ಕಲ್ಲಪಳ್ಳಿ ನೇತೃತ್ವದಲ್ಲಿ ಕ್ರಿಯಾಶೀಲ ಮತ್ತು ವೃತ್ತಿಪರ ಪತ್ರಕರ್ತರ ತಂಡ ಸುದ್ದಿಗಳನ್ನು ಅತ್ಯಂತ ಸರಳವಾಗಿ ಮತ್ತು ವೇಗವಾಗಿ ಮನ ಮುಟ್ಟುವಂತೆ ಧನಾತ್ಮಕ ದೃಷ್ಠಿಕೋನದಲ್ಲಿ ಜನರಿಗೆ ಮುಟ್ಟಿಸುವ ಕಾರ್ಯ ಮಾಡುತ್ತಿದೆ. ಜನಪರ, ಅಭಿವೃದ್ಧಿ ಪರ, ಪಾರದರ್ಶಕ ಮತ್ತು ಧನಾತ್ಮಕ ಪತ್ರಿಕೋದ್ಯಮ ನಮ್ಮ ಗುರಿ. ಜನರ ಆಶೋತ್ತರಗಳಿಗೆ ಧ್ವನಿಯಾಗುವ, ಸಮಸ್ಯೆಗಳಿಗೆ ಕನ್ನಡಿಯಾಗುವ ಆಶಯ ನಮ್ಮದು.ಗ್ರಾಮೀಣ ಭಾಗದಿಂದ ಆರಂಭಗೊಂಡು ಅಂತಾರಾಷ್ಟ್ರೀಯ ಮಟ್ಟದವರೆಗಿನ ಸುದ್ದಿಗಳ ಸಮೃದ್ಧಿಯ ಜೊತೆಗೆ, ವಿಶೇಷ ಲೇಖನಗಳು,ಮಾನವಸಾಕ್ತ ವರದಿಗಳು, ಹಿರಿಯ ಪತ್ರಕರ್ತರ, ಬರಹಗಾರರ ಅಂಕಣಗಳು ನಮ್ಮ ಮೀಡಿಯಾದಲ್ಲಿ ಓದುಗರನ್ನು ಮುಟ್ಟಲಿದೆ.

ಸಂಪರ್ಕಿಸಿ

ನಮ್ಮನ್ನು ಹೀಗೆ ಸಂಪರ್ಕಿಸಿ:

ಇ-ಮೇಲ್ ಐಡಿ: thesulliamirror@gmail.com
ದೂರವಾಣಿ ಸಂಖ್ಯೆ: 9008417480

ನಮ್ಮೊಂದಿಗೆ ಸಂಪರ್ಕದಲ್ಲಿರಿ

Facebook Twitter Whatsapp

2023 - Sullia Mirror. Website made with 🧡 by The Web People.

NEWS UPDATES ಪಡೆಯಲು ನಮ್ಮ ಗುಂಪಿನ ಕೊಂಡಿ

NEWS UPDATES ಪಡೆಯಲು ನಮ್ಮ ಗುಂಪಿನ ಕೊಂಡಿ