ಸುಳ್ಯ:ಮಾಣಿ- ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಬೃಹತ್ ಮರ ಮುರಿದು ಬಿದ್ದು ರಸ್ತೆ ಬಂದ್ ಆಗಿದ್ದು ಹೆದ್ದಾರಿಯಲ್ಲಿ ವಾಹನ ಸಂಚಾರಕ್ಕೆ ತಡೆ ಉಂಟಾಗಿದೆ. ಮರ ಮುರಿದು ಬಿದ್ದು ಸುಳ್ಯಕ್ಕೆ ವಿದ್ಯುತ್ ಸರಬರಾಜಾಗುವ 33 ಕೆವಿ ವಿದ್ಯುತ್ ಲೈನ್ನ ಕಂಬ ತುಂಡಾಗಿದ್ದು
ವಿದ್ಯುತ್ ಸಂಪರ್ಕ ಕಡಿತಗೊಂಡಿದೆ. ವಿದ್ಯುತ್ ಕಂಬ ತುಂಡಾಗಿದ್ದು ಲೈನ್ಗಳಿಗೂ ಹಾನಿಯಾಗಿದೆ. ಇದರಿಂದ 33 ಲೈನ್ ವಿದ್ಯುತ್ ಸರಬರಾಜು ಸ್ಥಗಿತಗೊಂಡಿದೆ. ವಾಹನ ಸಂಚಾರಕ್ಕೆ ತಡೆಯಾಗಿದೆ. ರಸ್ತೆಯ ಮೇಲೆ ಬಿದ್ದ ಮರಗಳ ತೆರವು ಕಾರ್ಯ ನಡೆಯುತಿದೆ. ಸುಳ್ಯದಲ್ಲಿ ರಾತ್ರಿ 8 ಗಂಟೆಯವರೆಗೆ ವಿದ್ಯುತ್ ಕಡಿತ ಉಂಟಾಗಲಿದೆ ಎಂದು ಮೆಸ್ಕಾಂ ಇಂಜಿನಿಯರ್ಗಳು ತಿಳಿಸಿದ್ದಾರೆ.