ಸುಳ್ಯ: ಸುಳ್ಯ ನಗರಪಂಚಾಯತ್ನಲ್ಲಿ 6 ವರ್ಷಗಳಿಂದ ನಗರಾಭಿವೃದ್ಧಿ ಪ್ರಾದಿಕಾರದ ಇಂಜಿನಿಯರ್ ಆಗಿ ಸೇವೆ ಸಲ್ಲಿಸಿ ಉನ್ನತ ವ್ಯಾಸಂಗಕ್ಕೆ ತೆರಳಿದ ಉಬೈದುಲ್ಲಾ ಅವರಿಗೆ ಬೀಳ್ಕೊಡುಗೆ ಸಮಾರಂಭ ಸುಳ್ಯ ನಗರ ಪಂಚಾಯತ್ ಸಭಾಂಗಣದಲ್ಲಿ ನಡೆಯಿತು. ಸಭಾದ್ಯಕ್ಷತೆಯನ್ನು ನಗರ
ಪಂಚಾಯತ್ ಮಾಜಿ ಅಧ್ಯಕ್ಷ ವಿನಯ ಕುಮಾರ್ ಕಂದಡ್ಕ ವಹಿಸಿದ್ದರು.ಮುಖ್ಯ ಅತಿಥಿಗಳಾಗಿ ಮಾಜಿ ಅಧ್ಯಕ್ಷರಾದ ಎಂ. ವೆಂಕಪ್ಪಗೌಡ ಎನ್. ಎ. ರಾಮಚಂದ್ರ, ಭಾಗವಹಿದ್ದರು. ಲಯನ್ಸ್ ಮಾಜಿ ರಾಜ್ಯಪಾಲ ಎಂ. ಬಿ. ಸದಾಶಿವ, ಮಾಜಿ ನಗರ ಪಂಚಾಯತ್ ಸದಸ್ಯ ಕೆ. ಎಂ. ಮುಸ್ತಫ ಶುಭ ಹಾರೈಸಿ ಮಾತನಾಡಿದರು. ನಗರ ಪಂಚಾಯತ್ ಮುಖ್ಯಾಧಿಕಾರಿ ಸುಧಾಕರ್ ಸ್ವಾಗತಿಸಿ ವಂದಿಸಿದರು. ಶಾಲು ಹೊದಿಸಿ ನೆನಪಿನ ಕಾಣಿಕೆ ನೀಡಿ ಶುಭ ಹಾರೈಸಲಾಯಿತು. ಉಬೈದುಲ್ಲಾ ಅವರು
ನಗರ ಪಂಚಾಯತ್ ಆವರಣದಲ್ಲಿ ಸಸಿ ನೆಟ್ಟರು.