ಉಡುಪಿ : ಉಡುಪಿ -ಚಿಕ್ಕಮಗಳೂರು ಲೋಕಸಭಾ ಚುನಾವಣೆಯಲ್ಲಿ ಒಟ್ಟು ಹತ್ತು ಮಂದಿ ಅಭ್ಯರ್ಥಿಗಳು ಅಂತಿಮವಾಗಿ ಕಣದಲ್ಲಿ ಉಳಿದುಕೊಂಡಿದ್ದಾರೆ. ನಾಮಪತ್ರ ಹಿಂದಕ್ಕೆ ಪಡೆಯಲು ಸೋಮವಾರ ಕೊನೆಯ ದಿನವಾಗಿದ್ದು, ಯಾವುದೇ ಅಭ್ಯರ್ಥಿ ನಾಮಪತ್ರ ಹಿಂದಕ್ಕೆ ಪಡೆಯದ ಕಾರಣ
ನಾಮಪತ್ರ ಕ್ರಮಬದ್ಧವಾಗಿದ್ದ ಎಲ್ಲರೂ ಸ್ಪರ್ಧಾಕಣದಲ್ಲಿ ಉಳಿದುಕೊಂಡರು.ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಸ್ಪರ್ಧಾಕಣದಲ್ಲಿ ಉಳಿದುಕೊಂಡ ಅಭ್ಯರ್ಥಿಗಳ ವಿವರ ಹೀಗಿದೆ. ಕೆ.ಜಯಪ್ರಕಾಶ್ ಹೆಗ್ಡೆ (ಇಂಡಿಯನ್ ನ್ಯಾಷನಲ್ ಕಾಂಗ್ರೆಸ್), ಕೋಟ ಶ್ರೀನಿವಾಸ ಪೂಜಾರಿ (ಭಾರತೀಯ ಜನತಾ ಪಕ್ಷ), ಕೆ.ಟಿ.ರಾಧಾಕೃಷ್ಣ (ಬಹುಜನ ಸಮಾಜ ಪಾರ್ಟಿ), ಸುಪ್ರೀತ್ ಕುಮಾರ್ ಪೂಜಾರಿ (ಜನಹಿತ ಪಕ್ಷ), ಶಬರೀಶ್ ಆರ್. (ಕರುನಾಡ ಸೇವಕರ ಪಕ್ಷ), ಎಲ್.ರಂಗನಾಥ್ ಗೌಡ (ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷ)., ಎಂ.ಕೆ. ದಯಾನಂದ (ಪ್ರೌಟಿಸ್ಟ್ ಸರ್ವ ಸಮಾಜ ಪಕ್ಷ), ಸಚಿನ್ ಬಿ.ಕೆ. (ಉತ್ತಮ ಪ್ರಜಾಕೀಯ ಪಕ್ಷ), ಸುಧೀರ್ ಕಾಂಚನ್ (ಪಕ್ಷೇತರ) ಹಾಗೂ ವಿಜಯಕುಮಾರ್ (ಪಕ್ಷೇತರ)