ಸುಳ್ಯ:ವಸತಿ ಯೋಜನೆಯಡಿ ಫಲಾನುಭವಿಗಳ ಅನುದಾನ ಬಿಡುಗಡೆಗೊಳಿಸಲು ಕ್ರಮ ಕೈಗೊಳ್ಳಬೇಕು ಎಂದು
ರಾಜೀವ್ ಗಾಂಧಿ ಗ್ರಾಮೀಣ ವಸತಿ ನಿಗಮದ ವ್ಯವಸ್ಥಾಪಕ ನಿರ್ದೇಶಕರಿಗೆ ಶಾಸಕಿ ಭಾಗೀರಥಿ ಮುರುಳ್ಯ ಮನವಿ ಸಲ್ಲಿಸಿದ್ದಾರೆ. ಸುಳ್ಯ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ
ಸುಳ್ಯ ಮತ್ತು ಕಡಬ ತಾಲೂಕಿನ ವ್ಯಾಪ್ತಿಯಲ್ಲಿ ವಿವಿಧ ವಸತಿ ಯೋಜನೆಯಡಿ ಆಯ್ಕೆಯಾದ ಫಲಾನುಭವಿಗಳ ಸಹಾಯಧನವನ್ನು ವಿವಿಧ ತಾಂತ್ರಿಕ ಕಾರಣದಿಂದಾಗಿ ನಿಗಮದಿಂದ ತಡೆ ಹಿಡಿಯಲಾಗಿದ್ದು ಸದರಿ ಸಮಸ್ಯೆಯನ್ನು ಬಗೆಹರಿಸಿ ಅನುದಾನವನ್ನು ಬಿಡುಗಡೆಗೊಳಿಸುವಂತೆ ಹಲವಾರು ಬಾರಿ ಕೋರಲಾಗಿದ್ದರು ನಿಗಮದ ವತಿಯಿಂದ ಸಮಸ್ಯೆಯನ್ನು ಇವರಿಗೂ ಬಗೆಹರಿಸಿರುವುದಿಲ್ಲ. ಆದ್ದರಿಂದ ಸಮಸ್ಯೆಯನ್ನು ಪರಿಹರಿಸಿ ಫಲಾನುಭವಿಗಳಿಗೆ ಅನುದಾನ ಬಿಡುಗಡೆಗೊಳಿಸಬೇಕೆಂದು ಸುಳ್ಯ ಶಾಸಕರಾದ ಮನವಿ ಸಲ್ಲಿಸಿದರು.