The Sullia Mirror
  • ಮುಖಪುಟ
  • ಗ್ರಾಮೀಣ
  • ನಗರ
  • ತಾಲೂಕು
  • ಜಿಲ್ಲೆ
  • ರಾಜ್ಯ
  • ದೇಶ
  • ವಿದೇಶ
  • ಅಂಕಣ
  • ಸುಳ್ಯ ಮಿರರ್‌ Exclusive
  • ಇತರ
    • ರಾಜಕೀಯ
    • ಕ್ರೀಡೆ
    • ಸಾಂಸ್ಕೃತಿಕ
The Sullia Mirror
  • ಮುಖಪುಟ
  • ಗ್ರಾಮೀಣ
  • ನಗರ
  • ತಾಲೂಕು
  • ಜಿಲ್ಲೆ
  • ರಾಜ್ಯ
  • ದೇಶ
  • ವಿದೇಶ
  • ಅಂಕಣ
  • ಸುಳ್ಯ ಮಿರರ್‌ Exclusive
  • ಇತರ
    • ರಾಜಕೀಯ
    • ಕ್ರೀಡೆ
    • ಸಾಂಸ್ಕೃತಿಕ

ಇಂದಿನಿಂದ ಮೇ.18ರ ತನಕ ಕೋಲ್ಚಾರಿನಲ್ಲಿ ಶ್ರೀ ವಯನಾಟ್ ಕುಲವನ್ ದೈವಂಕಟ್ಟು ಮಹೋತ್ಸವ:ಭಕ್ತಿ ಸಂಭ್ರಮದ ಮಹೋತ್ಸವಕ್ಕೆ ನಾಡಿಗೆ ನಾಡೇ ಅಣಿಯಾಗಿದೆ

by ದಿ ಸುಳ್ಯ ಮಿರರ್ ಸುದ್ದಿಜಾಲ May 16, 2023
by ದಿ ಸುಳ್ಯ ಮಿರರ್ ಸುದ್ದಿಜಾಲ May 16, 2023
Share this article

ಸುಳ್ಯ:ಕೋಲ್ಚಾರು ಕುಟುಂಬಸ್ಥರ ಶ್ರೀ ವಯನಾಟ್ ಕುಲವನ್ ದೈವಸ್ಥಾನದಲ್ಲಿ ಮೇ.16ರಿಂದ 18ರ ತನಕ ಶ್ರೀ ವಯನಾಟ್ ಕುಲವನ್ ದೈವಂಕಟ್ಟು ಮಹೋತ್ಸವ ನಡೆಯಲಿದೆ. ಸುಳ್ಯ ತಾಲೂಕಿನ ತೊಡಿಕಾನ ಸೀಮೆಗೆ ಒಳಪಟ್ಟ ಆಲೆಟ್ಟಿ ಗ್ರಾಮದ ಶ್ರೀ ಸದಾಶಿವ ಗ್ರಾಮ ದೇವರ ಹಾಗೂ ಕುತ್ತಿಕೋಲ್ ಶ್ರೀ ತಂಬುರಾಟಿ ಭಗವತಿ ಕ್ಷೇತ್ರದ ಪರಿಧಿಯಲ್ಲಿರುವ ಕೇರಳ ಗಡಿಪ್ರದೇಶವಾದ ಕೋಲ್ದಾರು ಮಣಿಗಾರಜ್ಜನ ವಂಶಸ್ಥರ ತರವಾಡಿನ ದೈವ ಸನ್ನಿಧಿಯಲ್ಲಿ ನಡೆಯುವ ದೈವಂಕಟ್ಟು ಮಹೋತ್ಸವಕ್ಕೆ

Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement

ಅದ್ದೂರಿ ಸಿದ್ಧತೆಗಳನ್ನು ಮಾಡಲಾಗಿದೆ.
ಮೇ16 ರಂದು (ಇಂದು) ಬೆಳಗ್ಗೆ 8-30ಕ್ಕೆ ಕೋಲ್ಚಾರು ಐನ್‌ಮನೆಯಿಂದ ಮತ್ತು ಶ್ರೀ ಶಾರದಾಂಬಾ ಭಜನಾ ಮಂದಿರದ ವಠಾರದಿಂದ ಊರ-ಪರವೂರ ಭಕ್ತಾಧಿಗಳಿಂದ ಚೆಂಡೆ ವಾದ್ಯ
ಘೋಷಗಳೊಂದಿಗೆ ಶ್ರೀ ಸನ್ನಿಧಿಗೆ ಹಸಿರುವಾಣಿ ಮೆರವಣಿಗೆ ನಡೆದು ಪೂ. 10-00ಕ್ಕೆ ಉಗ್ರಾಣ ತುಂಬುವ ಕಾರ್ಯಕ್ರಮ ನಡೆಯಲಿದೆ.
ಪೂ. 11ರಿಂದ ಧಾರ್ಮಿಕ ಸಭೆ ನಡೆಯಲಿದೆ. ಬೆಂಗಳೂರು ಚೆನ್ನೇನಹಳ್ಳಿಯ ಜನ ಸೇವಾ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಎ. ಎಸ್, ನಿರ್ಮಲ ಕುಮಾ‌ರ್ ಧಾರ್ಮಿಕ ಉಪನ್ಯಾಸ ನೀಡಲಿದ್ದಾರೆ. ಸಾಮಾಜಿಕ ಹಾಗೂ ಧಾರ್ಮಿಕ ಮುಖಂಡರು ಭಾಗವಹಿಸಲಿದ್ದಾರೆ.
ರಾತ್ರಿ 7 ಕ್ಕೆ ಕೈವೀದು ನಡೆಯಲಿದೆ.

ಪುರುಷೋತ್ತಮ ಕೋಲ್ಚಾರು ಅವರಿಂದ ಮಾಹಿತಿ

ಮೇ 17 ರಂದು ಸಂಜೆ 4.30ಕ್ಕೆ
ತರವಾಡು ದೈವಸ್ಥಾನದಿಂದ ಭಂಡಾರ ತರುವುದು.
5-30ಕ್ಕೆ ಶ್ರೀ ಕಾರ್ನೋನ್ ದೈವದ ವೆಳ್ಳಾಟ್ಟಂ ಸಂಜೆ 6-ಕ್ಕೆ ಶ್ರೀ ಕೋರಚ್ಛನ್ ದೈವದ ವೆಳ್ಳಾಟ್ಟಂ, ರಾತ್ರಿ 7-30ಕ್ಕೆ ಶ್ರೀ ಕಂಡನಾ‌ರ್ ಕೇಳನ್‌ ದೈವದ ವೆಳ್ಳಾಟಂ ನಡೆಯಲಿದೆ.ರಾತ್ರಿ 12 ಕ್ಕೆ ಶ್ರೀ ವಿಷ್ಣುಮೂರ್ತಿ ದೈವದ ತೊಡಂಙಲ್, ರಾತ್ರಿ 1 ಕ್ಕೆ ಶ್ರೀ ವಯನಾಟ್ ಕುಲವನ್ ದೈವದ ವೆಳ್ಳಾಟಂ ನಡೆಯಲಿದೆ‌

ಮೇ.18ರಂದು ಬೆಳಗ್ಗೆ 7 ರಿಂದ ಶ್ರೀ ಕಾರ್ನೋನ್ ದೈವ, ಬೆಳಗ್ಗೆ 9 ರಿಂದ ಶ್ರೀ ಕೋರಚ್ಚನ್ ದೈವಪೂರ್ವಾಹ್ನ 11ರಿಂದ ಶ್ರೀ ಕಂಡನಾ‌ರ್ ಕೇಳನ್ ದೈವಗಳ ಕೋಲ ನಡೆಯಲಿದೆ‌.ಅಪರಾಹ್ನ 3ರಿಂದ ಶ್ರೀ ವಯನಾಟ್ ಕುಲವನ್ ದೈವದ ಅಂಗಣ ಪ್ರವೇಶ ಮತ್ತು ಸೂಟೆ ಸಮರ್ಪಣೆ ನಡೆಯಲಿದೆ.ಅಪರಾಹ್ನ 4ರಿಂದ ಶ್ರೀ ವಿಷ್ಣುಮೂರ್ತಿ ದೈವದ ಅಂಗಣ ಪ್ರವೇಶ.ರಾತ್ರಿ ಮರ ಪಿಳರ್ಕಲ್, ನಂತರ ಕೈವೀದು ನಡೆಯುವುದರೊಂದಿಗೆ ಮಹೋತ್ಸವ ಸಂಪನ್ನಗೊಳ್ಳಲಿದೆ. ಮೂರು ದಿನಗಳ ಕಾಲ ನಿರಂತರ ಉಪಹಾರ ಮತ್ತು ಅನ್ನದಾನ ನಡೆಯಲಿರುವುದು ಎಂದು ದೈವಸ್ಥಾನದ ಆಡಳಿತ ಸಮಿತಿಯ ಅಧ್ಯಕ್ಷ ಪುರುಷೋತ್ತಮ ಕೋಲ್ಚಾರು ತಿಳಿಸಿದ್ದಾರೆ.

ಅದ್ದೂರಿ ಸಿದ್ಧತೆ:
ಶ್ರೀ ವಯನಾಟ್ ಕುಲವನ್ ದೈವಂಕಟ್ಟು ಮಹೋತ್ಸವಕ್ಕೆ ಅದ್ದೂರಿ ಸಿದ್ಧತೆಗಳನ್ನ ಮಾಡಲಾಗಿದೆ. ಮಹೋತ್ಸವಕ್ಕಾಗಿ ನಾಡಿಗೇ ನಾಡೇ ಅಣಿಯಾಗಿದೆ. ವರ್ಣ ವೈವಿಧ್ಯ ತಳಿರು ತೋರಣಗಳಿಂದ, ಪ್ಲೆಕ್ಸ್‌, ಬಂಟಿಂಗ್ಸ್‌ಗಳಿಂದ ಅಲಂಕರಿಸಲಾಗಿದೆ. ಸುಳ್ಯ ಕೋಲ್ಚಾರ್ ಬಂದಡ್ಕ ರಸ್ತೆ ಮುಖ್ಯ ರಸ್ತೆಯಿಂದ‌ ದೈವಸ್ಥಾನಕ್ಕೆ ಪ್ರವೇಶಿಸುವ ದ್ವಾರ ಆಕರ್ಷಕವಾಗಿ‌ ಮನ ಸೆಳೆಯುತಿದೆ. ದೈವಸ್ಥಾನದ ಮಾದರಿಯಲ್ಲಿಯೇ ದ್ವಾರ

ನಿರ್ಮಿಸಲಾಗಿದೆ. ಸುಳ್ಯ ನಗರ‌ ಸಮೀಪದ ನಾಗಪಟ್ಟಣ ಸೇತುವೆ ಬಳಿಯಿಂದಲೇ ಶೃಂಗಾರಗೊಂಡು ಭಕ್ತರನ್ನು ಸ್ವಾಗತಿಸುತಿದೆ.ಅಲ್ಲಿಂದ ದೈವಸ್ಥಾನದ ತನಕ ರಸ್ತೆ ಬದಿಯಲ್ಲಿ ವಯನಾಟ್ ಕುಲವನ್ ದೈವಂಕಟ್ಟು ಮಹೋತ್ಸವದ ಪ್ಲೆಕ್ಸ್‌‌ಗಳು ರಾರಾಜಿಸುತ್ತಿವೆ. ಪ್ಲೆಕ್ಸ್‌ಗಳು, ಬಂಟಿಂಗ್ಸ್‌ಗಳು ಮೂಲಕ ಗ್ರಾಮವೇ ಶೃಂಗಾರಗೊಂಡಿದೆ.
ದೈವಂಕಟ್ಟು ಮಹೋತ್ಸವಕ್ಕೆ ಎಲ್ಲಾ ಸಿದ್ಧತೆಗಳು ಪೂರ್ಣಗೊಂಡಿದೆ. ದೈವದ ಅಂಗಣ ಮತ್ತಿತರ ವ್ಯವಸ್ಥೆಗಳು. ಆಗಮಿಸುವವರಿಗೆ


ಕುಳಿತುಕೊಳ್ಳಲು ವಿಶಾಲವಾದ ವ್ಯವಸ್ಥೆ. ವಿಶಾಲವಾದ ಊಟದ ವ್ಯವಸ್ಥೆ, ಪಾರ್ಕಿಂಗ್ ವ್ಯವಸ್ಥೆ ಮಾಡಲಾಗಿದೆ. ದೈವಸ್ಥಾನದ ಸುತ್ತಲೂ ಲೈಟಿಂಗ್ಸ್‌ಗಳನ್ನು, ಬಣ್ಣ ಬಣ್ಣದ ಲೈಟಿಂಗ್ಸ್‌ಗಳು ಅಳವಡಿಸಲಾಗಿದೆ. ಮೂರು ದಿನಗಳ ಅದ್ದೂರಿ ಮಹೋತ್ಸವಕ್ಕೆ ಎಲ್ಲಾ ಸಿದ್ಧತೆ ಪೂರ್ಣಗೊಂಡಿದೆ.
50 ವರ್ಷದ ಬಳಿಕ ಕೋಲ್ಚಾರು ಕುಟುಂಬದ ವಯನಾಟ್ ಕುಲವನ್ ದೈವಸ್ಥಾನದಲ್ಲಿ ದೈವಂಕಟ್ಟು ಮಹೋತ್ಸವ ನಡೆಯುತಿದೆ ಎಂದು ದೈವಸ್ಥಾನದ ಆಡಳಿತ ಸಮಿತಿ ಅಧ್ಯಕ್ಷ ಪುರುಷೋತ್ತಮ ಕೋಲ್ಚಾರು ಹೇಳುತ್ತಾರೆ.

ದಿ ಸುಳ್ಯ ಮಿರರ್ ಸುದ್ದಿಜಾಲ

ದಿ ಸುಳ್ಯ ಮಿರರ್‌ ಸುದ್ದಿಜಾಲ. ಇದು ನಿಮ್ಮೂರಿನ ಪ್ರತಿಬಿಂಬ. ನಮಗೆ ನ್ಯೂಸ್‌ ಕಳುಹಿಸಲು thesulliamirror@gmail.com ಅಥವಾ 9008417480 ಗೆ ವಾಟ್ಸಪ್‌ ಮಾಡಿರಿ.

previous post
ಶುಭಮನ್‌ ಗಿಲ್ ಆಕರ್ಷಕ ಶತಕ: ಭರ್ಜರಿ ಗೆಲುವಿನೊಂದಿಗೆ ಪ್ಲೇ ಆಫ್‌ ಪ್ರವೇಶಿಸಿದ ಗುಜರಾತ್‌ ಟೈಟನ್ಸ್‌
next post
ಅನ್ಸಾರ್ ವತಿಯಿಂದ ಹಜ್ ತರಬೇತಿ ಶಿಬಿರ ಮತ್ತು ಬೀಳ್ಕೊಡುಗೆ ಸಮಾರಂಭ

You may also like

ಸ್ಪೀಕರ್ ಯು.ಟಿ.ಖಾದರ್ ಅವರಿಂದ ಉಪರಾಷ್ಟ್ರಪತಿ ಜಗದೀಪ್ ಧನಕರ್ ಭೇಟಿ

June 8, 2023

ಕೇರಳಕ್ಕೆ ಮುಂಗಾರು ಪ್ರವೇಶ: ವಾಡಿಕೆಗಿಂತ ಎಂಟು ದಿನ ತಡವಾಗಿ ಮಾನ್ಸೂನ್...

June 8, 2023

ಗ್ಯಾರಂಟಿ ಯೋಜನೆಗಳಅರ್ಜಿ ಸಲ್ಲಿಕೆ, ಅನುಮೋದನೆ ಪ್ರಕ್ರಿಯೆ ಸರಳವಾಗಿರಲಿ; ಅಧಿಕಾರಿಗಳಿಗೆ ಸಿಎಂ...

June 8, 2023

ಹಜ್ ಯಾತ್ರಾರ್ಥಿಗಳಿಗೆ ಬೀಳ್ಕೊಡುಗೆ ಸಮಾರಂಭ

June 8, 2023

ಎಸ್ಎಸ್ಎಫ್ ಇಲ್ಲುಮಿನೇಟ್ ಕ್ಯಾಂಪ್

June 7, 2023

ಎಸ್‌ಬಿಎಸ್ ಏಣಾವರ: ನೂತನ ಪದಾಧಿಕಾರಿಗಳು

June 7, 2023

ಗೃಹಲಕ್ಷ್ಮಿ ಯೋಜನೆಗೆ ಮಾರ್ಗಸೂಚಿ ಬಿಡುಗಡೆ ಮಾಡಿದ ಸರಕಾರ

June 7, 2023

ಅರಬ್ಬಿ ಸಮುದ್ರದಲ್ಲಿ ‘ಬಿಪರ್ಜೋಯ್’ ಚಂಡಮಾರುತ ಸೃಷ್ಟಿ: ತೀವ್ರ ಸ್ವರೂಪ ಪಡೆಯುತ್ತಿರುವ...

June 7, 2023

ಸಂಪಾಜೆಯ ನದಿಗಳಲ್ಲಿ ತುಂಬಿದ ಹೂಳು ತೆಗೆಯುವ ಕಾರ್ಯಾಚರಣೆಗೆ ಚಾಲನೆ

June 7, 2023

ಸುಳ್ಯ ನಗರ ಪಂಚಾಯತ್ ಪರಿಸರ ಈಗ ತ್ಯಾಜ್ಯ ಮುಕ್ತ..! ನ.ಪಂ.ಸುತ್ತಲೂ...

June 6, 2023

Leave a Comment Cancel Reply

ಇತ್ತೀಚಿನ ಸುದ್ದಿಗಳು

  • ಸ್ಪೀಕರ್ ಯು.ಟಿ.ಖಾದರ್ ಅವರಿಂದ ಉಪರಾಷ್ಟ್ರಪತಿ ಜಗದೀಪ್ ಧನಕರ್ ಭೇಟಿ
  • 11ರಿಂದ ಜಿಲ್ಲೆಯಾದ್ಯಂತ ಜಾನುವಾರುಗಳ ಚರ್ಮ ಗಂಟು ರೋಗದ ವಿರುಧ್ಧ ಉಚಿತ ಲಸಿಕಾ ಅಭಿಯಾನ
  • ಕೇರಳಕ್ಕೆ ಮುಂಗಾರು ಪ್ರವೇಶ: ವಾಡಿಕೆಗಿಂತ ಎಂಟು ದಿನ ತಡವಾಗಿ ಮಾನ್ಸೂನ್ ಆಗಮನ: ಕೇರಳದಲ್ಲಿ 4 ದಿನ ಮಳೆಯ ಮುನ್ಸೂಚನೆ
  • ಗ್ಯಾರಂಟಿ ಯೋಜನೆಗಳಅರ್ಜಿ ಸಲ್ಲಿಕೆ, ಅನುಮೋದನೆ ಪ್ರಕ್ರಿಯೆ ಸರಳವಾಗಿರಲಿ; ಅಧಿಕಾರಿಗಳಿಗೆ ಸಿಎಂ ಸೂಚನೆ: ಆಗಸ್ಟ್‌ನಲ್ಲಿ ಗೃಹ ಜ್ಯೋತಿ, ಗೃಹಲಕ್ಷ್ಮಿ ಯೋಜನೆಗೆ ಚಾಲನೆ
  • ಬಿ.ಎಸ್.ಯಡಿಯೂರಪ್ಪ ಸೇರಿ ಬಿಜೆಪಿ ರಾಜ್ಯ ಮುಖಂಡರ ಭೇಟಿಯಾದ ಶಾಸಕಿ ಭಾಗೀರಥಿ ಮುರುಳ್ಯ

ನಮ್ಮ ಬಗ್ಗೆ

ದಿ ಸುಳ್ಯ ಮಿರರ್ ಮಾಧ್ಯಮವು ಆಧುನಿಕ ಜಗತ್ತಿನ ವೇಗಕ್ಕೆ ಅನುಗುಣವಾಗಿ ಸುದ್ದಿಗಳನ್ನು ಅತ್ಯಂತ ವೇಗವಾಗಿ ಜನರಿಗೆ ತಲುಪಿಸುವ ಡಿಜಿಟಲ್ ಮಾಧ್ಯಮವಾಗಿದೆ. ಪತ್ರಕರ್ತ ಗಂಗಾಧರ ಕಲ್ಲಪಳ್ಳಿ ನೇತೃತ್ವದಲ್ಲಿ ಕ್ರಿಯಾಶೀಲ ಮತ್ತು ವೃತ್ತಿಪರ ಪತ್ರಕರ್ತರ ತಂಡ ಸುದ್ದಿಗಳನ್ನು ಅತ್ಯಂತ ಸರಳವಾಗಿ ಮತ್ತು ವೇಗವಾಗಿ ಮನ ಮುಟ್ಟುವಂತೆ ಧನಾತ್ಮಕ ದೃಷ್ಠಿಕೋನದಲ್ಲಿ ಜನರಿಗೆ ಮುಟ್ಟಿಸುವ ಕಾರ್ಯ ಮಾಡುತ್ತಿದೆ. ಜನಪರ, ಅಭಿವೃದ್ಧಿ ಪರ, ಪಾರದರ್ಶಕ ಮತ್ತು ಧನಾತ್ಮಕ ಪತ್ರಿಕೋದ್ಯಮ ನಮ್ಮ ಗುರಿ. ಜನರ ಆಶೋತ್ತರಗಳಿಗೆ ಧ್ವನಿಯಾಗುವ, ಸಮಸ್ಯೆಗಳಿಗೆ ಕನ್ನಡಿಯಾಗುವ ಆಶಯ ನಮ್ಮದು.ಗ್ರಾಮೀಣ ಭಾಗದಿಂದ ಆರಂಭಗೊಂಡು ಅಂತಾರಾಷ್ಟ್ರೀಯ ಮಟ್ಟದವರೆಗಿನ ಸುದ್ದಿಗಳ ಸಮೃದ್ಧಿಯ ಜೊತೆಗೆ, ವಿಶೇಷ ಲೇಖನಗಳು,ಮಾನವಸಾಕ್ತ ವರದಿಗಳು, ಹಿರಿಯ ಪತ್ರಕರ್ತರ, ಬರಹಗಾರರ ಅಂಕಣಗಳು ನಮ್ಮ ಮೀಡಿಯಾದಲ್ಲಿ ಓದುಗರನ್ನು ಮುಟ್ಟಲಿದೆ.

ಸಂಪರ್ಕಿಸಿ

ನಮ್ಮನ್ನು ಹೀಗೆ ಸಂಪರ್ಕಿಸಿ:

ಇ-ಮೇಲ್ ಐಡಿ: thesulliamirror@gmail.com
ದೂರವಾಣಿ ಸಂಖ್ಯೆ: 9008417480

ನಮ್ಮೊಂದಿಗೆ ಸಂಪರ್ಕದಲ್ಲಿರಿ

Facebook Twitter Whatsapp

2023 - Sullia Mirror. Website made with 🧡 by The Web People.

NEWS UPDATES ಪಡೆಯಲು ನಮ್ಮ ಗುಂಪಿನ ಕೊಂಡಿ

NEWS UPDATES ಪಡೆಯಲು ನಮ್ಮ ಗುಂಪಿನ ಕೊಂಡಿ