ಸುಳ್ಯ:ಕೆ.ವಿ.ಜಿ ಇಂಜಿನಿಯರಿಂಗ್ ಕಾಲೇಜಿನಲ್ಲಿ ರಾಷ್ಟ್ರಮಟ್ಟದ ಚಾಂಪ್ಯನ್ಶಿಪ್ ಪಡೆದ ವಾಯುಜಿತ್ ರೇಸಿಂಗ್ ಗೋ-ಕಾರ್ಟ್ 7-0 ಡಿಸೈನ್ ಚಾಲೆಂಜ್ ತಂಡಕ್ಕೆ ಅಭಿನಂದನಾ ಸಭೆಯು ಕಾಲೇಜಿನ ಆಡಳಿತ ಮಂಡಳಿ ಚೇರ್ಮೆನ್ ಕಮಿಟಿ ‘ಬಿ’ ಎ.ಒ.ಎಲ್.ಇ(ರಿ) ಡಾ| ರೇಣುಕಾಪ್ರಸಾದ್ ಕೆ.ವಿ. ಅವರ ಮಾರ್ಗದರ್ಶನದಲ್ಲಿ
ಅತಿಥಿಗಳಾಗಿ
ನ.ಪಂ.ಮಾಜಿ ಅಧ್ಯಕ್ಷ ಎನ್.ಎ. ರಾಮಚಂದ್ರ, ಅರಂತೋಡು-ತೊಡಿಕಾನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಶ್ರೀ ಸಂತೋಷ್ ಕುತ್ತಮೊಟ್ಟೆ, ಸುಳ್ಯ ವರ್ತಕರ ಸಂಘದ ಅಧ್ಯಕ್ಷ ಪಿ.ಬಿ. ಸುಧಾಕರ ರೈ, ಸುಳ್ಯ ತಾಲೂಕು ಇಂಟೆಕ್ ಅಧ್ಯಕ್ಷ ಶಾಫಿ ಕುತ್ತಮೊಟ್ಟೆ ಇವರು ರಾಷ್ಟ್ರಮಟ್ಟದ ಚಾಂಪ್ಯನ್ಶಿಪ್ ಪಡೆದ ತಂಡಕ್ಕೆ ಅಭಿನಂದನೆ ಸಲ್ಲಿಸಿ ಮಾತನಾಡಿದರು.
ಕಾಲೇಜಿನ ಸಿ.ಇ.ಒ, ಕಂಪ್ಯೂಟರ್ ಸೈನ್ಸ್ ವಿಭಾಗದ ಮುಖ್ಯಸ್ಥರು ಮತ್ತು ವಿ.ಟಿ.ಯು.ನ ಕಾರ್ಯಕಾರಿ ಮಂಡಳಿ ಸದಸ್ಯರಾದ
ಡಾ. ಉಜ್ವಲ್ ಯು.ಜೆ. ಅಧ್ಯಕ್ಷೀಯ ನೆಲೆಯಲ್ಲಿ ಮಾತನಾಡಿ ಕಾಲೇಜಿನ

ವಾಯುಜಿತ್ ರೇಸಿಂಗ್ ಗೋ-ಕಾರ್ಟ್ಗೆ ಉನ್ನತ ಕೌಶಲ್ಯ, ಮರು ಕೌಶಲ್ಯ ಮತ್ತು ಹೊಸ ತಂತ್ರಜ್ಞಾನದ ನವೀಕರಣ ಅಗತ್ಯ ಎಂದು ಹೇಳಿ ರಾಷ್ಟ್ರ ಮಟ್ಟದ ಚಾಂಪ್ಯನ್ಶಿಪ್ ಗಳಿಸಿಕೊಂಡ ತಂಡಕ್ಕೆ ಅಭಿನಂದನೆ ಸಲ್ಲಿಸಿ ಶುಭ ಹಾರೈಸಿದರು. ಪ್ರಾಂಶುಪಾಲ ಡಾ. ಸುರೇಶ ವಿ. ಅಭಿನಂದನೆ ಸಲ್ಲಿಸಿದರು.
ಗೋ-ಕಾರ್ಟ್ ೭.೦ ಡಿಸೈನ್ ತಂಡದ ಮಾರ್ಗದರ್ಶಕ ಪ್ರೊ. ಭರತ್ ಪಿ.ಯು ಮತ್ತು ಪ್ರೊ. ರಾಘವೇಂದ್ರ ಬಿ. ಕಾಮತ್ ವಿಭಾಗ ಮುಖ್ಯಸ್ಥರು ಮೆಕ್ಯಾನಿಕಲ್ ಇಂಜಿನಿಯರಿಂಗ್ ವಿಭಾಗ ಇವರನ್ನು ಸನ್ಮಾನಿಸಲಾಯಿತು. ಇದೇ ಕಾರ್ಯಕ್ರಮದಲ್ಲಿ ಕಾಲೇಜಿನ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಉಜ್ವಲ್ ಯು.ಜೆ. ಯವರನ್ನು ಸನ್ಮಾನಿಸಿ ಗೌರವಿಸಲಾಯಿತು. ಅಲ್ಲದೆ ಗೋ-ಕಾರ್ಟ್ ರೇಸಿಂಗ್ ಟೀಮ್ನ ಲೀಡರ್ ಜಯರಾಜ್ ಹಾಗೂ ತಂಡದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು. ಪ್ರೊ. ಭರತ್ ಪಿ.ಯು ಗೋ-ಕಾರ್ಟ್ನ ಇತಿಹಾಸ ಮತ್ತು ಬೇರೆ ಬೇರೆ ಸ್ಪರ್ಧೆಗಳ ಬಗ್ಗೆ ಮಾಹಿತಿ ನೀಡಿದರು. ಗೋ-ಕಾರ್ಟ್ ೭.೦ ಡಿಸೈನ್ ಬಗ್ಗೆ ತಂಡದ ಲೀಡರ್ ಜಯರಾಜ್ ಮಾಹಿತಿ ನೀಡಿದರು.

ಮೆಕ್ಯಾನಿಕಲ್ ಇಂಜಿನಿಯರಿಙಗ್ ವಿಭಾಗದ ವಿದ್ಯಾರ್ಥಿಗಳಾದ ನಿಶಾ, ಧನ್ಯಶ್ರೀ ಹಾಗೂ ಜೀವಿತ ಪ್ರಾರ್ಥಿಸಿ, ಟ್ರೈನಿಂಗ್ & ಪ್ಲೇಸ್ಮೆಂಟ್ ಆಫೀಸರ್ ಹಾಗೂ ಮೆಕ್ಯಾನಿಕಲ್ ಇಂಜಿನಿಯರಿಂಗ್ ವಿಭಾಗದ ಪ್ರಾಧ್ಯಾಪಕ ಪ್ರೊ. ಪ್ರಶಾಂತ್ ಕೆ. ಸ್ವಾಗತಿಸಿ, ಮೆಕ್ಯಾನಿಕಲ್ ಇಂಜಿನಿಯರಿಂಗ್ ವಿಭಾಗದ ಪ್ರಾಧ್ಯಾಪಕ ಪ್ರೊ.ಅಭಿಜ್ಞ ಬಿ.ಬಿ. ವಂದಿಸಿದರು ಹಾಗೂ ಕಂಪ್ಯೂಟರ್ ಸೈನ್ಸ್ & ಇಂಜಿನಿಯರಿಂಗ್ ವಿಭಾಗ ಪ್ರಾಧ್ಯಾಪಕರಾದ ಪ್ರೊ. ನಸೀಮ ಸಿ.ಎ ಮತ್ತು ಗಣಿತಶಾಸ್ತ್ರ ವಿಭಾಗದ ಪ್ರಾಧ್ಯಾಪಕಿ ಪ್ರೊ. ಆಶ್ರಿತ ಕೆ.ಎಂ. ಕಾರ್ಯಕ್ರಮವ
ನಿರೂಪಿಸಿದರು. ಎಲ್ಲಾ ವಿಭಾಗಗಳ ಮುಖ್ಯಸ್ಥರು, ಪ್ರಾಧ್ಯಾಪಕರುಗಳು ಹಾಗೂ ಆಡಳಿತಾಧಿಕಾರಿ ನಾಗೇಶ್ ಕೊಚ್ಚಿ ಮತ್ತು ವಿದ್ಯಾರ್ಥಿವೃಂದ ಕಾಲೇಜಿನ ಎಲ್ಲಾ ಬೋಧಕ, ಬೋಧಕೇತರ ಸಿಬ್ಬಂದಿಗಳು ಭಾಗವಹಿಸಿದ್ದರು.