ಸುಳ್ಯ:ಸುಳ್ಯದ ಗೌಡರ ಯುವ ಸೇವಾ ಸಂಘ ಪ್ರವರ್ತಿಸಲ್ಪಡುವ
ಶ್ರೀ ವೆಂಕಟರಮಣ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯ ಬೆಳ್ಳಿ ಹಬ್ಬ ಪ್ರಯುಕ್ತ ಕ್ರೀಡಾ ಸಮ್ಮಿಲನ ಹಾಗೂ ಮಲ್ನಾಡ್ ಮಹಾತ್ಮಾಗಾಂಧಿ ಪ್ರೌಢಶಾಲೆಗೆ ನಿರ್ಮಿಸುವ ಎರಡು ಕೊಠಡಿಗಳಿಗೆ ಗುದ್ದಲಿಪೂಜೆ ಫೆ.24ರಂದು ಪೂ.8.30ರಿಂದ ಕೊಡಿಯಾಲಬೈಲು ಎಂಜಿಎಂ ಶಿಕ್ಷಣ ಸಂಸ್ಥೆಗಳ ಕ್ರೀಡಾಂಗಣದಲ್ಲಿ ನಡೆಯಲಿದೆ.ಸಂಸ್ಥೆಯು 25 ವರುಷ ಪೂರೈಸುತ್ತಿರುವ ಈ ಸಂಧರ್ಭದಲ್ಲಿ ಬೆಳ್ಳಿಹಬ್ಬವನ್ನು ಆಚರಿಸಲು
ನಿರ್ಧರಿಸಿದ್ದು, ಇದರ ನೆನಪಿಗಾಗಿ ನಮ್ಮ ಶಿಕ್ಷಣ ಸಂಸ್ಥೆಯಾಗಿ ಉತ್ತಮ ಸೇವೆ ನೀಡುತ್ತಿರುವ ಮಹಾತ್ಮಾಗಾಂಧಿ ಮಲ್ನಾಡ್ ವಿದ್ಯಾಸಂಸ್ಥೆಯ ಶಾಲಾ 2 ಕೊಠಡಿಗಳನ್ನು ನಿರ್ಮಿಸಿಕೊಡಲಾಗುವುದು. ಇದರ ಗುದ್ದಲಿಪೂಜೆ ನಡೆಯಲಿದೆ. ಸಂಘದ ಕಾರ್ಯವ್ಯಾಪ್ತಿಯಲ್ಲಿರುವ ಕೃಷಿ ಪತ್ತಿನ ಸಹಕಾರ ಸಂಘಗಳಿಗೆ, ಇತರೆ ಸಹಕಾರ ಸಂಘಗಳಿಗೆ, ನಮ್ಮ ಸಂಸ್ಥೆಯ ಸದಸ್ಯರಿಗೆ, ಆಡಳಿತ ಮಂಡಳಿ ಸದಸ್ಯರಿಗೆ, ಸಲಹಾ ಸಮಿತಿಯವರಿಗೆ ಹಾಗೂ ಸಿಬ್ಬಂದಿಗಳಿಗೆ, ವಿವಿಧ ಸ್ಪರ್ಧೆಗಳನ್ನು ಏರ್ಪಡಿಸಲಾಗಿದೆ. ಕೃಷಿ ಪತ್ತಿನ ಸಹಕಾರ ಸಂಘಗಳಿಗೆ ಮತ್ತು ಇತರೆ ಸಹಕಾರ ಸಂಘಗಳಿಗೆ ಹಗ್ಗಜಗ್ಗಾಟ, ಅದೃಷ್ಟ ಪುರುಷ ಮತ್ತು ಅದೃಷ್ಟ ಮಹಿಳೆ, ಶ್ರೀ ವೆಂಕಟರಮಣ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯ ಸದಸ್ಯರಿಗೆ ನಿಧಾನ ಬೈಕ್ ಸ್ಕೂಟಿ ಓಡಿಸುವುದು. ಲಕ್ಕಿ ಗೇಮ್, ಗುಂಡೆಸೆತ ಮತ್ತು ಒಂದು ನಿಮಿಷದ ಸ್ಪರ್ಧೆ, ಆಡಳಿತ ಮಂಡಳಿ ಸದಸ್ಯರಿಗೆ ಮತ್ತು ಸಲಹಾ ಸಮಿತಿಯವರಿಗೆ ಹಿರಿಯರ ನಡಿಗೆ ಸ್ಪರ್ಧೆ, ಭಾಷಣ ಸ್ಪರ್ಧೆ, ಲಕ್ಕಿ ಗೇಮ್ ಮತ್ತು ಒಂದು ನಿಮಿಷದ ಸ್ಪರ್ಧೆ, ಸಿಬ್ಬಂದಿಗಳಿಗೆ ಹಗ್ಗಜಗ್ಗಾಟ, ನಿಧಾನ ಬೈಕ್, ಸ್ಕೂಟಿ ಓಡಿಸುವುದು, ಗುಂಡೆಸೆತ ಮತ್ತು ಲಕ್ಕಿ ಗೇಮ್ ಸ್ಪರ್ಧೆ ನಡೆಸಲಾಗುವುದು.
ಈ ಕ್ರೀಡಾ ಸಮ್ಮಿಲನ ಕಾರ್ಯಕ್ರಮವನ್ನು ಪ್ರಶಸ್ತಿ ಪುರಸ್ಕೃತ ಹಿರಿಯ ಕ್ರೀಡಾಪಟು ಬಾಲಕೃಷ್ಣ ಗೌಡ ಕುದ್ವ ಉದ್ಘಾಟಿಸಲಿದ್ದಾರೆ. ಸಂಸ್ಥೆಯ ಅಧ್ಯಕ್ಷ ಪಿ.ಸಿ. ಜಯರಾಮ ಅಧ್ಯಕ್ಷತೆಯನ್ನು ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ವಿಶ್ರಾಂತ ದೈಹಿಕ ಶಿಕ್ಷಣ ನಿರ್ದೇಶಕರಾದ ರಾಧಾಕೃಷ್ಣ ಮಾಣಿಬೆಟ್ಟು ಮತ್ತು ಗೌಡ ಸೋಶಿಯೋ ಎಜ್ಯುಕೇಶನ್ ಫೌಂಡೇಶನ್ ಸುಳ್ಯ ಇದರ ಅಧ್ಯಕ್ಷ ಚಂದ್ರಾ ಕೋಲ್ಟಾರ್ ಭಾಗವಹಿಸಲಿದ್ದಾರೆ ಎಂದು ಶ್ರೀ ವೆಂಕಟರಮಣ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯ ಅಧ್ಯಕ್ಷ ಪಿ.ಸಿ.ಜಯರಾಮ ತಿಳಿಸಿದ್ದಾರೆ.