ಸುಳ್ಯ: ಸುಳ್ಯ ಹಳೆಗೇಟಿನ ಶ್ರೀ ಕೇಶವ ಕೃಪಾ ವೇದ ಮತ್ತು ಕಲಾ ಪ್ರತಿಷ್ಠಾನದ ವತಿಯಿಂದ 24 ನೇ ವರ್ಷದ ಶ್ರೀ ಕೇಶವಕೃಪಾ ವೇದ-ಯೋಗ-ಕಲಾ ಶಿಬಿರ-2024 ಏ.21ರಿಂದ ಮೇ.19ರ ತನಕ ನಡೆಯಲಿದೆ. ಕರ್ನಾಟಕ, ಕೇರಳ ಸೇರಿ ವಿವಿಧ ರಾಜ್ಯಗಳಿಂದ ವಿದ್ಯಾರ್ಥಿಗಳು ಶಿಬಿರದಲ್ಲಿ ಭಾಗವಹಿಸಲಿದ್ದಾರೆ. 200ಕ್ಕೂ ಅಧಿಕ ಮಂದಿ
ವಿದ್ಯಾರ್ಥಿಗಳು ಒಂದು ತಿಂಗಳ ಕಾಲ ನಡೆಯುವ ಶಿಬಿರದಲ್ಲಿ ಭಾಗವಹಿಸಲಿದ್ದಾರೆ.ಏ.21ರಂದು ಪೂ.10-30ಕ್ಕೆ
“ಶ್ರೀ ಕೇಶವಕಿರಣ” ಸಭಾಂಗಣದಲ್ಲಿ ನಡೆಯುವ ಸಮಾರಂಭದಲ್ಲಿ ಯುಎಸ್ಎಯ ವಿದ್ವಾನ್ ರೂಪೇಶ್ ಆಚಾರ್ಯ ಮತ್ತು ಶ್ರೀಮತಿ ಶ್ರುತಿ ರೂಪೇಶ್ ಆಚಾರ್ಯ ಶಿಬಿರವನ್ನು ಉದ್ಘಾಟಿಸುವರು. ಕೇಶವ ಕೃಪಾ ವೇದ ಯೋಗ ಕಲಾ ಶಿಬಿರದ ಸಂಚಾಲಕರಾದ ವೇ. ಮೂ. ಅಭಿರಾಮ ಶರ್ಮ ಅಧ್ಯಕ್ಷತೆ ವಹಿಸುವರು.ಮಂಕು ತಿಮ್ಮನ ಕಗ್ಗದ ಪ್ರವಚನಕಾರರಾದ ವಿದ್ವಾನ್ ಜಿ.ಎಸ್.ನಟೇಶ್ ಶಿವಮೊಗ್ಗ ದಿಕ್ಸೂಚಿ ಭಾಷಣ ಮಾಡುವರು.
ಪ್ರಗತಿಪರ ಕೃಷಿಕರು ಹಾಗೂ ಶಿಬಿರದ ಹಿರಿಯ ವಿದ್ಯಾರ್ಥಿ ಸುಬ್ರಹ್ಮಣ್ಯ ಭಟ್ ತೊಂಡೆಮೂಲೆ ಮುಖ್ಯ ಅತಿಥಿಗಳಾಗಿ ಭಾಗವಹಿಸುವರು.
ಶ್ರೀ ಕೇಶವ ಕೃಪಾ ವೇದ ಮತ್ತು ಕಲಾ ಪ್ರತಿಷ್ಠಾನದ ಗೌರವಾಧ್ಯಕ್ಷ ಗೋಪಾಲಕೃಷ್ಣ ಭಟ್ ವಗೆನಾಡು ಉಪಸ್ಥಿತರಿರುವರು ಎಂದು ಶ್ರೀ ಕೇಶವ ಕೃಪಾ ವೇದ ಮತ್ತು ಕಲಾ ಪ್ರತಿಷ್ಠಾನದ ಅಧ್ಯಕ್ಷ ಪುರೋಹಿತ ನಾಗರಾಜ ಭಟ್ ತಿಳಿಸಿದ್ದಾರೆ.