ಸುಳ್ಯ:ಶ್ರೀ ವೆಂಕಟರಮಣ ಕ್ರೆಡಿಟ್ ಕೋ ಅಪರೇಟಿವ್ ಸೊಸೈಟಿಯ ಬೆಳ್ಳಿ ಹಬ್ಬದ ನೆನಪಿಗೆ ಸಂಘದ ಸಹ ಸಂಸ್ಥೆ ಕೊಡಿಯಾಲಬೈಲ್ನ
ಮಹಾತ್ಮಾ ಗಾಂಧಿ ಮಲ್ನಾಡ್ ವಿದ್ಯಾ ಸಂಸ್ಥೆಗೆ ಕೊಡುಗೆಯಾಗಿ ನೀಡಿದ 3 ಕೊಠಡಿಗಳ ಉದ್ಘಾಟನೆ ಜ.20ರಂದು ಸೋಮವಾರ ಪೂ.10.30ಕ್ಕೆ ನಡೆಯಲಿದೆ ಎಂದು ಶ್ರೀ ವೆಂಕಟರಮಣ ಕ್ರೆಡಿಟ್ ಕೋ ಅಪರೇಟಿವ್ ಸೊಸೈಟಿಯ ಅಧ್ಯಕ್ಷರಾದ ಪಿ.ಸಿ.ಜಯರಾಮ ತಿಳಿಸಿದ್ದಾರೆ. ಸಂಸ್ಥೆಯಲ್ಲಿ ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಬೆಳ್ಳಿ ಹಬ್ಬದ ಸವಿ ನೆನಪಿಗಾಗಿ ಶಾಶ್ವತ ಕೊಡುಗೆಗಳನ್ನು ನೀಡಬೇಕೆಂಬ ಉದ್ದೇಶದಿಂದ
ತರಗತಿ ಕೊಠಡಿ ನಿರ್ಮಾಣ ಮಾಡಲಾಗಿದೆ. ಸಂಸ್ಥೆಯ ಬೈಲಾದಲ್ಲಿ ಸೇರಿಸಿ ಶಿಕ್ಷಣ ಸಂಸ್ಥೆಗಳನ್ನು ಸ್ಥಾಪಿಸಿ ನಿರ್ವಹಿಸುವುದು ಎಂಬ ಉದ್ದೇಶದಿಂದ ಗೌಡರ ಯುವ ಸೇವಾ ಸಂಘ 2000ನೇ ವರ್ಷದಲ್ಲಿ ಆರಂಭಿಸಿದ ಸುಳ್ಯದ ಕೊಡಿಯಾಲಬೈಲ್ನ ಮಹಾತ್ಮ ಗಾಂಧಿ ಮಲ್ನಾಡ್ ಪ್ರೌಢಶಾಲೆಗೆ 3 ಕೊಠಡಿಗಳನ್ನು ನೀಡಲು ಮತ್ತು ಬ್ಯಾಂಕ್ ಕಟ್ಟಡವನ್ನು ಮೇಲಂತಸ್ತಿಗೆ ಏರಿಸುವುದು ಎಂದು ಆಡಳಿತ ಮಂಡಳಿ ನಿರ್ಧರಿಸಿದೆ. ಶಾಲಾ ಕೊಠಡಿ ನಿರ್ಮಾಣ ಪೂರ್ತಿಗೊಂಡಿದೆ. ಕೇಂದ್ರ ಕಛೇರಿಯಲ್ಲಿ ಮೇಲಂತಸ್ತಿನ ಕಾಮಾಗಾರಿಗಳು ಭರದಿಂದ ಸಾಗುತ್ತಿದೆ.ಮಹಾತ್ಮ ಗಾಂಧಿ ಮಲ್ನಾಡ್ ಪ್ರೌಢಶಾಲೆ 2000 ನೇ ವರ್ಷದಲ್ಲಿ ಕನ್ನಡ ಮಾಧ್ಯಮದಲ್ಲಿ ಆರಂಭಿಸಲಾದ ಸಂಸ್ಥೆ ಸುಮಾರು 15 ಎಸ್ಎಸ್ಎಲ್ಸಿ ಬ್ಯಾಚ್ಗಳು ಶೇಕಡಾ 100 ಫಲಿತಾಂಶವನ್ನು ಪಡೆದಿದೆ. ಇದೀಗ ಆಂಗ್ಲ ಮಾಧ್ಯಮ ಶಾಲೆಯನ್ನು

ಆರಂಭಿಸಿ ಎಲ್ಕೆಜಿಯಿಂದ 9 ನೇ ತರಗತಿಯವರೆಗೆ ಮಕ್ಕಳು ವಿದ್ಯಾರ್ಜನೆ ಪಡೆಯುತ್ತಿದ್ದಾರೆ. ಕಡಿಮೆ ಶುಲ್ಕ, ಉಚಿತ ಊಟದ ವ್ಯವಸ್ಥೆಯೊಂದಿಗೆ ಸುಮಾರು 210 ಕ್ಕೂ ಮಿಕ್ಕಿ ಮಕ್ಕಳು ವಿದ್ಯಾಭ್ಯಾಸ ಪಡೆಯುತ್ತಿದ್ದಾರೆ. ಆ ಸಲುವಾಗಿ ಸುಮಾರು 30 ಲಕ್ಷ ವೆಚ್ಚದಲ್ಲಿ 3 ಕೊಠಡಿಗಳನ್ನು ನಿರ್ಮಿಸಿ ನೀಡಲಾಗಿದೆ. ಗೌಡರ ಯುವ ಸೇವಾ ಸಂಘಕ್ಕೆ 6.15 ಎಕ್ರೆ ಸ್ವಂತ ಜಮೀನು ಇದೆ. ಅಲ್ಲಿ ಗೌಡ ಸಮುದಾಯ ಭವನ ನಿರ್ಮಿಸಲಾಗಿ ಅದರ ನಿರ್ವಹಣೆಗೂ ಬ್ಯಾಂಕ್ ಸಹಕಾರ ನೀಡುತ್ತಿದೆ ಎಂದು ಹೇಳಿದರು. ಶಾಲಾ ಕೊಠಡಿಯ ಉದ್ಘಾಟನೆಯನ್ನು ಶಾಸಕಿ ಭಾಗೀರಥಿ ಮುರುಳ್ಳ ನೆರವೇರಿಸಲಿದ್ದಾರೆ. ದ್ವೀಪ ಪ್ರಜ್ವಲನೆಯನ್ನು ಮಾಜಿ ಸಚಿವರಾದ ಬಿ.ರಮಾನಾಥ ರೈ ನಡೆಸಲಿದ್ದಾರೆ.ಅಧ್ಯಕ್ಷತೆಯನ್ನು ಶ್ರೀ ವೆಂಕಟರಮಣ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯ ಅಧ್ಯಕ್ಷ ಪಿ.ಸಿ. ಜಯರಾಮ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಅರೆಭಾಷೆ ಅಕಾಡೆಮಿಯ ಅಧ್ಯಕ್ಷ ಸದಾನಂದ ಮಾವಜಿ, ಪುತ್ತೂರು ಸಹಾಯಕ ಕಮೀಷನರ್ ಜುಬಿನ್ ಮೊಹಾಪಾತ್ರ, ಗೌಡರ ಯುವ ಸೇವಾ ಸಂಘದ ಸ್ಥಾಪಕಾಧ್ಯಕ್ಷ ನಿತ್ಯಾನಂದ ಮುಂಡೋಡಿ, ಗೌಡ ಸಮುದಾಯ ಭವನ ನಿರ್ಮಾಣ ಸಮಿತಿ ಅಧ್ಯಕ್ಷ ಎ.ವಿ ತೀರ್ಥರಾಮ, ಉಬರಡ್ಕ ಗ್ರಾ.ಪಂ.ಅಧ್ಯಕ್ಷೆ ಪೂರ್ಣಿಮ ಸೂಂತೋಡು, ಉಪಾಧ್ಯಕ್ಷೆ ಚಿತ್ರಕುಮಾರಿ ಪಾಲಡ್ಕ, ಕ್ಷೇತ್ರ ಶಿಕ್ಷಣಾಧಿಕಾರಿ ಶೀತಲ್ ಯು.ಕೆ., ಗೌಡರ ಯುವ ಸೇವಾ ಸಂಘದ ಅಧ್ಯಕ್ಷ ಪಿ.ಎಸ್ ಗಂಗಾಧರ, ಎಂ.ಜಿ.ಎಂ ಪ್ರೌಢ ಶಾಲೆಯ ಸಂಚಾಲಕ ದೊಡ್ಡಣ್ಣ ಬರೆಮೇಲು ಭಾಗವಹಿಸಲಿದ್ದಾರೆ ಎಂದು ಪಿ.ಸಿ.ಜಯರಾಮ ತಿಳಿಸಿದ್ದಾರೆ.

ಸಾಧನೆಯ ಹಾದಿಯಲ್ಲಿ ವೆಂಕಟ್ರಮಣ ಸೊಸೈಟಿ:
ಶ್ರೀ ವೆಂಕಟರಮಣ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯು1997ರಲ್ಲಿ ಆರಂಭಗೊಂಡು ಗೌಡರ ಯುವ ಸೇವಾ ಸಂಘ ಸುಳ್ಯ ಇವರಿಂದ ಪ್ರವರ್ತಿಸಲ್ಪಟ್ಟಿದ್ದು, ಸದಸ್ಯರ ಅನುಕೂಲಕ್ಕಾಗಿ ವಾಹನ ಸಾಲ, ಚಿನ್ನಾಭರಣ ಈಡಿನ ಸಾಲ, ಭದ್ರತಾ ಸಾಲ, ಗೃಹಸಾಲ, ವಾಣಿಜ್ಯ ಕಟ್ಟಡ ಸಾಲ, ಜಮೀನು ಖರೀದಿ ಸಾಲ, ಜಮೀನು ಅಡವು ಸಾಲ, ವೇತನ ಸಾಲ, ವ್ಯಾಪಾರ ಸಾಲ ಹಾಗೂ ಜಾಮೀನು ಸಾಲಗಳನ್ನು ನೀಡುತ್ತಿದ್ದು, ಹಾಗೇಯೇ ಇ-ಸ್ಟಾಂಪಿಂಗ್ ವಿತರಣೆ. RTGS/NEFT ಸೌಲಭ್ಯವನ್ನು ನೀಡುತ್ತಿದ್ದೇವೆ. ಸಂಸ್ಥೆಯು ಇಂದು ರಾಜ್ಯದ ಉದ್ದಗಲಕ್ಕೆ ತನ್ನ ಕಾರ್ಯವ್ಯಾಪ್ತಿಯನ್ನು ವಿಸ್ತರಿಸಿದೆ.ಆರಂಭದ ವರ್ಷದಿಂದಲೇ ಲಾಭದಲ್ಲಿ ಮುನ್ನಡೆದಿದೆ. ಇದೀಗ ರಾಜ್ಯದ ವಿವಿಧ ಭಾಗಗಳಲ್ಲಿ 23 ಶಾಖೆಗಳನ್ನು ಆರಂಭಿಸಿ ವ್ಯವಹಾರ ನಡೆಸುತ್ತಿದೆ.
ವರದಿ ವರ್ಷದಲ್ಲಿ ನಮ್ಮ ಸಹಕಾರಿ ಸಂಘವು ರೂ.222 ಕೋಟಿ ಠೇವಣೆ ಹೊಂದಿದ್ದು, ರೂ.215 ಕೋಟಿ ಸಾಲಗಳನ್ನು ಸದಸ್ಯರುಗಳಿಗೆ ವಿತರಿಸಿರುತ್ತದೆ.ದುಡಿಯುವ ಬಂಡವಾಳ ರೂ.242 ಕೋಟಿ ಇದ್ದು ಒಟ್ಟು ರೂ.1,200 ಕೋಟಿಗೂ ಮಿಕ್ಕಿ ವಾರ್ಷಿಕ ವ್ಯವಹಾರವನ್ನು ನಡೆಸುತ್ತಿದ್ದೇವೆ.ಸಂಘಕ್ಕೆ ಸುಳ್ಯದ ಮೊಗರ್ಪಣೆಯಲ್ಲಿ ಮುಖ್ಯ ರಸ್ತೆ ಪಕ್ಕ 33.50 ಸೆಂಟ್ಸ್ ಸ್ವಂತ ನಿವೇಶನ ಇದ್ದು, ಇದರಲ್ಲಿ ಸಂಘಕ್ಕೆ ಸುಸಜ್ಜಿತವಾದ ವಾಣಿಜ್ಯ ಮಳಿಗೆಗಳನ್ನೊಳಗೊಂಡ ಕಟ್ಟಡವನ್ನು ನಿರ್ಮಿಸಿರುತ್ತೇವೆ. ಸಂಘದ ಹೆಚ್ಚಿನ ಎಲ್ಲಾ ಶಾಖೆಗಳಲ್ಲಿ ಇ ಸ್ಟಾಂಪಿಂಗ್ ವಿತರಣೆ ಮಾಡುತ್ತಿದ್ದು, ಸುಳ್ಯ ಶಾಖೆಯಲ್ಲಿ ಸೇಫ್ ಡಿಪಾಸಿಟ್ ಲಾಕರ್ ವ್ಯವಸ್ಥೆ ಸೌಲಭ್ಯ ದೊರೆಯುತ್ತಿದೆ.ಇದೀಗ ಬೆಳ್ಳಿಹಬ್ಬದ ಸಂಭ್ರಮದಲ್ಲಿದ್ದು ಸದಸ್ಯರ ಸಂಖ್ಯೆಯನ್ನು 20,000 ಕ್ಕೆ ಏರಿದೆ, ಪಾಲು ಬಂಡವಾಳ 4.97 ಕೋಟಿ ಏರಿಕೆ, ಠೇವಣಿ 222 ಕೋಟಿಗೆ ಏರಿದೆ,ಸಾಲ 215 ಕೋಟಿಗೆ ಏರಿದೆ. ವಾರ್ಷಿಕ 400 ಕೋಟಿ ವ್ಯವಹಾರ ನಡೆಸುತ್ತಿದ್ದ ಸಂಸ್ಥೆ 1,200 ಕೋಟಿ ವ್ಯವಹಾರವನ್ನು ನಡೆಸುತ್ತಿದೆ ಎಂದು ವಿವರಿಸಿದರು.
ಸುದ್ದಿಗೋಷ್ಠಿಯಲ್ಲಿ ಸಂಘದ ಉಪಾಧ್ಯಕ್ಷ ಮೋಹನ್ರಾಮ್ ಸುಳ್ಳಿ, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕೆ.ಟಿ. ವಿಶ್ವನಾಥ, ನಿರ್ದೇಶಕರಾದ ಜಾಕೆ ಸದಾನಂದ, ನಿತ್ಯಾನಂದ ಮುಂಡೋಡಿ, ಎ.ವಿ.ತೀರ್ಥರಾಮ, ಚಂದ್ರ ಕೋಲ್ಚಾರ್, ಕೆ.ಸಿ.ನಾರಾಯಣ ಗೌಡ, ಕೆ.ಸಿ ಸದಾನಂದ, ಪಿ.ಎಸ್. ಗಂಗಾಧರ, ದಿನೇಶ ಮಡಪ್ಪಾಡಿ, ದಾಮೋದರ ನಾರ್ಕೋಡು, ಹೇಮಚಂದ್ರ ಐ. ಕೆ, ನವೀನ್ ಕುಮಾರ್ ಜೆ.ವಿ, ಶೈಲೇಶ್ ಅಂಬೆಕಲ್ಲು, ಜಯಲಲಿತಾ ಕೆ.ಎಸ್, ಲತಾ ಎಸ್ ಮಾವಜಿ, ನಳಿನಿ ಸೂರಯ್ಯ, ವ್ಯವಸ್ಥಾಪಕರಾದ ಚಂದ್ರಶೇಖರ ಮೇರ್ಕಜೆ ಉಪಸ್ಥಿತರಿದ್ದರು.