ಸುಳ್ಯ:ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿ ಮತ್ತು ಖಾಸಗಿ ಉದ್ಯೋಗಗಳ ವೃತ್ತಿಪರ ಕೌಶಲ್ಯ ತರಬೇತಿ ಸಂಸ್ಥೆ ಪುತ್ತೂರಿನ ವಿದ್ಯಾಮಾತಾ ಅಕಾಡೆಮಿಯು ಸೆ.28ರಂದು ಸುಳ್ಯದಲ್ಲಿ ಶುಭಾರಂಭಗೊಳ್ಳಲಿದೆ. ವಿದ್ಯಾಮಾತಾ ಫೌಂಡೇಶನ್’ ಈಗಾಗಲೇ ಮೂರು ರಾಜ್ಯ ಮಟ್ಟದ ಉದ್ಯೋಗ ಮೇಳಗಳು, ಸುಮಾರು 500ಕ್ಕೂ ಹೆಚ್ಚು ಉದ್ಯೋಗ ಸಂದರ್ಶನಗಳ ಮೂಲಕ 5000ಕ್ಕೂ ಮಿಕ್ಕಿದ ವಿದ್ಯಾರ್ಥಿಗಳಿಗೆ ವಿವಿಧ ಕಂಪನಿಗಳಲ್ಲಿ ಉದ್ಯೋಗ ಕೊಡಿಸಲಾಗಿದೆ. ಕರಾವಳಿ ಜಿಲ್ಲೆಗಳಲ್ಲಿ
ಸ್ಪರ್ಧಾತ್ಮಕ ಪರೀಕ್ಷೆಗಳ ಬಗ್ಗೆ, ವಿದ್ಯಾರ್ಥಿಗಳಲ್ಲಿ ಜಾಗೃತಿ ಮತ್ತು ತರಬೇತಿ ನೀಡಿ 90ಕ್ಕೂ ಹೆಚ್ಚು ವಿದ್ಯಾರ್ಥಿಗಳು ಸರಕಾರಿ ಹಾಗೂ ಸರಕಾರಿ ಗ್ರಾಮದ ಇಲಾಖೆಗಳಲ್ಲಿ ಆಯ್ಕೆಯಾಗುವಂತೆ ಮಾಡಿರುವ ಹೆಮ್ಮೆ ವಿದ್ಯಾಮಾತಾ ಅಕಾಡಮಿಯದಾಗಿದೆ ಎಂದು ವಿದ್ಯಾಮಾತಾ ಆಕಾಡೆಮಿಯ ಆಡಳಿತ ನಿರ್ದೇಶಕ ಭಾಗ್ಯೇಶ್ ರೈ ಹಾಗೂ ಸಾರ್ವಜನಿಕ ಸಂಪರ್ಕ ಅಧಿಕಾರಿ ಚಂದ್ರಾವತಿ ಬಡ್ಡಡ್ಕ ತಿಳಿಸಿದ್ದಾರೆ.
ಇಪ್ಪತ್ತಕ್ಕೂ ಹೆಚ್ಚಿನ ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಆರು ತಿಂಗಳ ಅವಧಿಯಲ್ಲಿ ಏಕಕಾಲದಲ್ಲಿ ತರಬೇತಿ ಪಡೆಯುವ ಅವಕಾಶ ನೀಡುತಿದೆ. ಸದ್ಯ ಓದುತ್ತಿರುವ ವಿದ್ಯಾರ್ಥಿಗಳಿಗೆ ಸದ್ಯ ಉದ್ಯೋಗದಲ್ಲಿರುವವರಿಗೆ ಅನುಕೂಲವಾಗುವಂತೆ ದಿನನಿತ್ಯ ರಾತ್ರಿ 8ರಿಂದ 9 ರವರೆಗೆ (ಒಂದು ಗಂಟೆ) ಆನ್ಲೈನ್ ಮುಖಾಂತರ ತರಬೇತಿ ನಡೆಯುವ ಅವಕಾಶ,
ನೇರ ತರಗತಿಗಳಲ್ಲಿ ವಾಲ್ಗೊಳ್ಳುವವರಿಗೆ ವಾರದ 5 ದಿನ ಬೆಳಿಗೆ 9:30ರಿಂದ ಮಧ್ಯಾಹ್ನ 1:00ರವರೆಗೆ ಆರು
ತಿಂಗಳ ತರಬೇತಿ. ತರಬೇತಿ ಮುಗಿದರೂ ಎರಡು ವರ್ಷಗಳು ನಿರಂತರವಾಗಿ ಅರ್ಜಿ ಸಲ್ಲಿಕೆ ಪ್ರವೇಶ ಪತ್ರ, ವಿಶೇಷ
ತರಗತಿಗಳನ್ನು ಉಚಿತವಾಗಿ ನೀಡುವ ಮುಖಾಂತರ ಸರಕಾರಿ ಹುದ್ದೆಗೆ ಆಯ್ಕೆಯಾಗಲುಸಂಪೂರ್ಣವಾಗಿ ವಿದ್ಯಾಮಾತಾ ಅಕಾಡೆಮಿಯು ಬೆಂಬಲವಾಗಿ ನಿಲ್ಲುತ್ತದೆ.
ತರಬೇತಿ ಪಡೆಯುವ ಪ್ರತಿ ಅಭ್ಯರ್ಥಿಗೂ ಉಚಿತ ಕಂಪ್ಯೂಟರ್, ಸ್ಪೋಕನ್ ಇಂಗ್ಲಿಷ್, ದೈಹಿಕ ಸದೃಢತೆಯ ಮೈದಾನ ತರಬೇತಿ ನೀಡಲಾಗುತ್ತದೆ.
ಅಧಿಕಾರಿಗಳು, ನಿವೃತ್ತರು, ದೇಶದ ಬೇರೆ ಬೇರೆ ಭಾಗಗಳ ವಿಶೇಷ ಸಂಪನ್ಮೂಲ ವ್ಯಕ್ತಿಗಳ ಮೂಲಕ ನಿರಂತರ ತರಬೇತಿ ಕಾರ್ಯಾಗಾರಗಳನ್ನು ನಡೆಸಲಾಗುವುದು. ಪ್ರತಿವಾದ ಅಣಕು ಪರೀಕ್ಷೆಗಳು, ಹಳೆಯ ಪ್ರಶ್ನೆ ಪತ್ರಿಕೆಗಳ ಪುನರ್ ವಿಮರ್ಶೆಯ ಮೂಲಕ
ತರಬೇತಿಗೊಳಿಸಲಾಗುತ್ತದೆ.
ದೇಶ – ವಿದೇಶಗಳಲ್ಲಿ ಉತ್ತಮ ಕಂಪನಿಗಳ ಉದ್ಯೋಗಕ್ಕಾಗಿ ವುಯತ್ನಿಸುವವರಿಗೆ ಡಿಪ್ಲೋಮಾ ಇನ್ ಪ್ರಾಕ್ಟಿಕಲ್ ಅಕೌಂಟಿಂಗ್ ಆಂಡ್ ಟ್ಯಾಕ್ಸೇಶನ್ ಕೋರ್ಸ್ಗಳನ್ನು ನೀಡಲಾಗುತ್ತದೆ. ಇದೆಲ್ಲಾ ಸೌಲಭ್ಯಗಳನ್ನು ಒಂದೇ ಸೂರಿನಡಿಯಲ್ಲಿ ನಡೆಯುವ ಅವಕಾಶ, ಸುಳ್ಯ, ಕೊಡಗು, ಮಡಿಕೇರಿ ಹಾಗೂ ವಿವಿಧ ತಾಲೂಕು ಹಾಗು ಜಿಲ್ಲೆಗಳ ಕರಾವಳಿ ಭಾಗದ ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಸರಕಾರಿ ಹಾಗೂ ಸರಕಾರಿ ಸ್ವಾಮ್ಯದ ವಿವಿಧ ಇಲಾಖೆಗಳಲ್ಲಿ ಉದ್ಯೋಗ ಲಭಿಸುವಂತಾಗಲು ಪ್ರತಿ ವಿದ್ಯಾರ್ಥಿಯನ್ನು ತಯಾರಿ ಮಾಡುವುದು ಹಾಗೂ ಸರಕಾರಿ ಹುದ್ದೆಗೆ ಆಯ್ಕೆಯಾಗದೆ ಇರುವ ವಿದ್ಯಾರ್ಥಿಗಳನ್ನು ಖಾಸಗಿ ವಲಯದಲ್ಲಿ ಉದ್ಯೋಗಕ್ಕೆ ಸಂಬಂಧಿಸಿದಂತೆ ಪ್ರತಿ ವಿದ್ಯಾರ್ಥಿಯನ್ನು ತಯಾರಿ ಮಾಡುವುದು, ವಿದ್ಯಾಮಾತಾ ಅಕಾಡಮಿಯ ಉದ್ದೇಶವಾಗಿರುತ್ತದೆ ಎಂದು ಅವರು ಹೇಳಿದರು.