The Sullia Mirror
  • ಮುಖಪುಟ
  • ಗ್ರಾಮೀಣ
  • ನಗರ
  • ತಾಲೂಕು
  • ಜಿಲ್ಲೆ
  • ರಾಜ್ಯ
  • ದೇಶ
  • ವಿದೇಶ
  • ಅಂಕಣ
  • ಸುಳ್ಯ ಮಿರರ್‌ Exclusive
  • ಇತರ
    • ರಾಜಕೀಯ
    • ಕ್ರೀಡೆ
    • ಸಾಂಸ್ಕೃತಿಕ
The Sullia Mirror
  • ಮುಖಪುಟ
  • ಗ್ರಾಮೀಣ
  • ನಗರ
  • ತಾಲೂಕು
  • ಜಿಲ್ಲೆ
  • ರಾಜ್ಯ
  • ದೇಶ
  • ವಿದೇಶ
  • ಅಂಕಣ
  • ಸುಳ್ಯ ಮಿರರ್‌ Exclusive
  • ಇತರ
    • ರಾಜಕೀಯ
    • ಕ್ರೀಡೆ
    • ಸಾಂಸ್ಕೃತಿಕ

ಸುಳ್ಯದ ಪಂಚಾಯತ್ ರಾಜ್ ಇಂಜಿನಿಯರಿಂಗ್ ಉಪ ವಿಭಾಗ ಖಾಲಿ ಖಾಲಿ..: ಇಂಜಿನಿಯರ್‌ಗಳಿಲ್ಲದೆ ಕೆಲಸದ ಒತ್ತಡದಲ್ಲಿ ನಲುಗಿದೆ ಇಲಾಖೆ

by ದಿ ಸುಳ್ಯ ಮಿರರ್ ಸುದ್ದಿಜಾಲ October 21, 2022
by ದಿ ಸುಳ್ಯ ಮಿರರ್ ಸುದ್ದಿಜಾಲ October 21, 2022
Share this article

ಸುಳ್ಯ: ಗ್ರಾಮೀಣ ಭಾಗದ ರಸ್ತೆ, ಕುಡಿಯುವ ನೀರು, ಶಾಲೆ, ಅಂಗನವಾಡಿ ಸೇರಿದಂತೆ ತಾಲೂಕಿನ ಬಹುತೇಕ ಕಾಮಗಾರಿಯನ್ನು ನಿರ್ವಹಿಸುವ ಇಲಾಖೆ ಪಂಚಾಯತ್ ರಾಜ್ ಇಂಜಿನಿಯರಿಂಗ್ ವಿಭಾಗ. ಆದರೆ ಸುಳ್ಯ ತಾಲೂಕಿನ ಪಂಚಾಯತ್ ರಾಜ್ ಇಂಜಿನಿಯರಿಂಗ್ ಉಪ ವಿಭಾಗ ಮಾತ್ರ ಖಾಲಿ ಬಿದ್ದಿದೆ. ಇಂಜಿನಿಯರ್‌ಗಳ ಕೊರತೆಯಿಂದ ಇಲಾಖೆಯು ಕೆಲಸದ ಒತ್ತಡದಲ್ಲಿ ನಲುಗಿದೆ. ಇರುವ ಬೆರಳೆಣಿಕೆ ಇಂಜಿನಿಯರ್‌ಗಳಿಗೆ ಕೆಲಸ ದುಪ್ಪಟ್ಟಾಗಿದೆ. ಸುಳ್ಯದ ಪಂಚಾಯತ್ ರಾಜ್ ಇಂಜಿನಿಯರಿಂಗ್ ವಿಭಾಗದಲ್ಲಿ

Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
ಪಂಚಾಯತ್ ರಾಜ್ ಇಂಜಿನಿಯರಿಂಗ್ ಉಪವಿಭಾಗ

4 ಮಂದಿ ಸಹಾಯಕ ಇಂಜಿನಿಯರ್‌ಗಳು ಹಾಗು ಒಬ್ಬರು ಸಹಾಯಕ‌ ಕಾರ್ಯನಿರ್ವಾಹಕ ಇಂಜಿನಿಯರ್‌ ಹುದ್ದೆಗಳು ಬೇಕು. ಅದರಂತೆ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗದಲ್ಲಿ 4 ಮಂದಿ ಸಹಾಯಕ ಇಂಜಿನಿಯರ್‌ಗಳು ಹಾಗು ಒಬ್ಬರು ಸಯಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಹುದ್ದೆ ಇದೆ. ಆದರೆ ಪಂಚಾಯತ್ ರಾಜ್ ಇಂಜಿನಿಯರಿಂಗ್ ವಿಭಾಗದಲ್ಲಿ ಎಲ್ಲಾ ಇಂಜಿನಿಯರ್‌ಗಳ ಹುದ್ದೆ ಕೂಡ ಖಾಲಿ ಇದೆ. 4 ಮಂದಿ ಸಹಾಯಕ ಇಂಜಿನಿಯರ್ ಹುದ್ದೆ ಖಾಲಿ ಇದೆ. ಸಹಾಯಕ ಕಾರ್ಯಪಾಲಕ ಇಂಜಿನಿಯರ್ ವರ್ಗಾವಣೆಯಾಗಿದ್ದು ಸದ್ಯ ಪ್ರಭಾರ ವಹಿಸಲಾಗಿದೆ. ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗದಲ್ಲಿ ಒಬ್ಬರು ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಮತ್ತು ಇಬ್ಬರು ಸಹಾಯಕ ಇಂಜಿನಿಯರ್‌ಗಳು ಇದ್ದಾರೆ. ಅಂದರೆ ಎರಡೂ ವಿಭಾಗದಲ್ಲಿ ಒಟ್ಟು 10 ಮಂದಿ ಇಂಜಿನಿಯರ್‌ಗಳು ಬೇಕಾಗಿದ್ದು ಈಗ ಕೇವಲ 3 ಮಂದಿ ಮಾತ್ರ ಇದ್ದಾರೆ. ಒಬ್ಬರು ಎಇಇ ಪ್ರಭಾರ ಇದ್ದಾರೆ. ಗ್ರಾಮೀಣ ಕುಡಿಯುವ ನೀರು ವಿಭಾಗದ ಇಬ್ಬರು ಸಹಾಯಕ ಇಂಜಿನಿಯರ್‌ಗಳಿಗೆ ಹೆಚ್ಚುವರಿಯಾಗಿ ಪಪಂಚಾಯತ್ ರಾಜ್‌ನ ಜವಾಬ್ದಾರಿಯನ್ನೂ ನೀಡಲಾಗಿದೆ. ಅಲ್ಲದೇ ಎರಡೂ ವಿಭಾಗದಲ್ಲಿ ತಲಾ ಒಬ್ಬರಂತೆ ಪ್ರಥಮ ದರ್ಜೆ ಮತ್ತು ದ್ವಿತೀಯ ದರ್ಜೆ ಸಹಾಯಕರ ಹುದ್ದೆ ಇದೆ. ಆದರೆ ಎರಡೂ ವಿಭಾಗಗಳಲ್ಲಿ ಒಟ್ಟು 4 ಮಂದಿ ಇರಬೇಕಾದಲ್ಲಿ ಪಂಚಾಯತ್ ವಿಭಾಗದಲ್ಲಿ ಒಬ್ಬರು ಮಾತ್ರ ಇದ್ದಾರೆ.

ಒಬ್ಬೊಬ್ಬರಿಗೆ 800-1000 ಕೆಲಸ:
ಗ್ರಾಮ ಪಂಚಾಯತ್‌ನ ವಿವಿಧ ಅಭಿವೃದ್ಧಿ ಕೆಲಸಗಳು, ತಾಲೂಕು ಪಂಚಾಯತ್, ಜಿಲ್ಲಾ ಪಂಚಾಯತ್, ಸಂಸದರು, ಶಾಸಕರು, ವಿಧಾನ ಪರಿಷತ್ ಸದಸ್ಯರುಗಳ ಅಭಿವೃದ್ಧಿ ಅನುದಾನಗಳ ಕೆಲಸಗಳು, ವಿಶೇಷ ಅನುದಾನಗಳು, ಪ್ರಾಕೃತಿಕ ವಿಕೋಪ ಕಾಮಗಾರಿಗಳು ಶಾಲೆ, ಅಂಗನವಾಡಿ ಸೇರಿ ವಿವಿಧ ಅಭಿವೃದ್ಧಿ ಕೆಲಸಗಳನ್ನು ಪಂಚಾಯತ್ ರಾಜ್ ಇಂಜಿನಿಯರಿಂಗ್, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ನಿರ್ವಹಿಸಬೇಕು. ಪ್ರತಿ ಪಂಚಾಯತ್‌ಗಳಲ್ಲಿಯೂ ವಾರ್ಷಿಕ ಕಡಿಮೆ ಎಂದರೂ 50 ಕ್ಕೂ ಹೆಚ್ಚು ಕಾಮಗಾರಿಗಳು ಇರುತ್ತದೆ. ಒಟ್ಟಿನಲ್ಲಿ ಉಪ ವಿಭಾಗ ವ್ಯಾಪ್ತಿಯಲ್ಲಿ ಸಾವಿರಾರು ಕಾಮಗಾರಿಗಳು ಇರುತ್ತವೆ. ಪ್ರತಿ ಇಂಜಿನಿಯರ್‌ಗಳು ಕೂಡ 800 ರಿಂದ 1000 ಕಾಮಗಾರಿಗಳನ್ನು ನಿರ್ವಹಿಸಬೇಕಾಗುತ್ತದೆ. ಈ ಹಿನ್ನಲೆಯಲ್ಲಿ ಇಲಾಖೆಯಲ್ಲಿ ಇಂಜಿನಿಯರ್‌ಗಳ ಕೆಲಸದ ಒತ್ತಡವನ್ನು ಹೆಚ್ಚಿಸಲಿದೆ. ಇತ್ತೀಚೆಗೆ ಸರಕಾರದಿಂದ‌ ಸುಳ್ಯ ವಿಧಾನ ಸಭಾ ಕ್ಷೇತ್ರಕ್ಕೆ 50 ಕೋಟಿ ಅನುದಾನ ಬಂದಿತ್ತು. ಅದರಲ್ಲಿ 45 ಕೋಟಿ ಜಿಲ್ಲಾ ಪಂಚಾಯತ್ ರಸ್ತೆಗಳಿಗೆ ಮೀಸಲಿರಿಸಲಾಗಿತ್ತು. ಇದರಲ್ಲಿ 100 ಕ್ಕೂ ಅಧಿಕ ಕಾಮಗಾರಿಗಳು ಸುಳ್ಯ ಪಂಚಾಯತ್ ರಾಜ್ ಇಂಜಿನಿಯರಿಂಗ್ ವಿಭಾಗ ನಿರ್ವಹಿಸಬೇಕಾಗಿದ್ದು ಟೆಂಡರ್ ಹಂತದಲ್ಲಿದೆ. ಪಂಚಾಯತ್ ರಾಜ್ ಇಂಜಿನಿಯರಿಂಗ್ ಉಪ ವಿಭಾಗದಲ್ಲಿ ಇಂಜಿನಿಯರ್‌ಗಳ ಕೊರತೆ ಉಂಟಾಗಿರುವುದರಿಂದ ಇಲಾಖೆಯಲ್ಲಿ ಕೆಲಸದ ಒತ್ತಡ ಅಧಿಕವಾಗುವುದರ ಜೊತೆಗೆ ಕಾಮಗಾರಿಯ ವೇಗವೂ ಕುಂಠಿತವಾಗುವ ಸಾಧ್ಯತೆ ಇದೆ. ಆದುದರಿಂದ ಆದಷ್ಟು ಬೇಗ ಇಂಜಿನಿಯರ್‌ಗಳನ್ನು ನೇಮಕ ಮಾಡಬೇಕು ಎಂಬ ಬೇಡಿಕೆ ಸಾರ್ವಜನಿಕ ವಲಯದಿಂದ ವ್ಯಕ್ತವಾಗಿದೆ.

ದಿ ಸುಳ್ಯ ಮಿರರ್ ಸುದ್ದಿಜಾಲ

ದಿ ಸುಳ್ಯ ಮಿರರ್‌ ಸುದ್ದಿಜಾಲ. ಇದು ನಿಮ್ಮೂರಿನ ಪ್ರತಿಬಿಂಬ. ನಮಗೆ ನ್ಯೂಸ್‌ ಕಳುಹಿಸಲು thesulliamirror@gmail.com ಅಥವಾ 9008417480 ಗೆ ವಾಟ್ಸಪ್‌ ಮಾಡಿರಿ.

previous post
ಕೆಎಸ್‌ಆರ್‌ಟಿಸಿ ವತಿಯಿಂದ ದೀಪಾವಳಿ ಟೂರ್ ಪ್ಯಾಕೇಜ್
next post
ಅ.31 ರಂದು ಕೆ.ವಿ.ಜಿ. ದಂತ ಮಹಾವಿದ್ಯಾಲಯ ಮತ್ತು ಆಸ್ಪತ್ರೆಯಲ್ಲಿ ಅತ್ಯಾಧುನಿಕ ಸಿಬಿಸಿಟಿ ಎಕ್ಸ್ ರೇ ಘಟಕ, ಸಂಶೋಧನಾ ಕೇಂದ್ರ, ಮತ್ತು ಔಷಧಾಲಯದ ಲೋಕಾರ್ಪಣೆ

You may also like

ಹಿಂದುತ್ವಕ್ಕಾಗಿ, ಸಮಾಜದ ಉಳಿವಿಗಾಗಿ ಯಾವ ತ್ಯಾಗಕ್ಕೂ ಸಿದ್ಧ:ಅರುಣ್ ಕುಮಾರ್ ಪುತ್ತಿಲ:...

June 4, 2023

ಮುಂಗಾರು ಪ್ರವೇಶಕ್ಕೆ ಕ್ಷಣಗಣನೆ: ಕರಾವಳಿ, ದಕ್ಷಿಣ ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ...

June 4, 2023

ಅರೆಭಾಷೆ ರಸಾಯನ: ಐತಾರದ ಪೊಳ್ಮೆ.. ಪೂರಾ ಹೆಳ್ಮಕ್ಕಳಿಗೆ ಕೊಟ್ಟರೆ ಗಳ್ಮಕ್ಕಳಿಗೆ...

June 4, 2023

ಸರಕಾರದ ಗ್ಯಾರಂಟಿ ಯೋಜನೆ: ಯುವ ನಿಧಿ, ಅನ್ನಭಾಗ್ಯ ಯೋಜನೆಗಳ ಮಾರ್ಗಸೂಚಿ...

June 3, 2023

5 ಗ್ಯಾರಂಟಿ ಯೋಜನೆಗಳಂತಹಾ ಜನಪರ ಕಾರ್ಯಕ್ರಮ ನೀಡಲು ಕಾಂಗ್ರೆಸ್‌ನಿಂದ ಮಾತ್ರ...

June 3, 2023

ಬಾಲಸೋರ್ ರೈಲು ಅಪಘಾತ: ಮೃತರ ಸಂಖ್ಯೆ 233 ಕ್ಕೆ, 900...

June 3, 2023

ಒಡಿಶಾ ರೈಲು ದುರಂತ: ಮೃತರ ಕುಟುಂಬಕ್ಕೆ 10 ಲಕ್ಷ ರೂ.,...

June 2, 2023

ಒಡಿಶಾದ ಬಾಲಸೋರ್​​ನಲ್ಲಿ ರೈಲು ಅಪಘಾತ: 50 ಮಂದಿ ಸಾವು: 300...

June 2, 2023

ರಾಜ್ಯ ಸರಕಾರದ ಐದು ಗ್ಯಾರಂಟಿಗಳ ಅನುಷ್ಠಾನ ಹೇಗೆ.? ಷರತ್ತುಗಳು ಏನು..?...

June 2, 2023

ಐದೂ ಗ್ಯಾರಂಟಿಗಳ ಜಾರಿಗೆ ಸರ್ಕಾರ ನಿರ್ಧಾರ: ಸಿಎಂ ಸಿದ್ದರಾಮಯ್ಯ ಘೋಷಣೆ

June 2, 2023

Leave a Comment Cancel Reply

ಇತ್ತೀಚಿನ ಸುದ್ದಿಗಳು

  • ಸಿಎಸ್​ಕೆ ಸ್ಟಾರ್ ಬ್ಯಾಟರ್ ಋತುರಾಜ್ ಗಾಯಕ್ವಾಡ್​- ಉತ್ಕರ್ಷ ಪವಾರ್ ಮದುವೆ ಸಂಭ್ರಮ
  • ಕೇರಳದ ನರ್ಸ್‌ಗೆ ಒಲಿದ 45 ಕೋಟಿಯ ಅಬುಧಾಬಿ ಬಿಗ್ ಟಿಕೆಟ್ ಲಾಟರಿ ಅದೃಷ್ಟ
  • ಹಿಂದುತ್ವಕ್ಕಾಗಿ, ಸಮಾಜದ ಉಳಿವಿಗಾಗಿ ಯಾವ ತ್ಯಾಗಕ್ಕೂ ಸಿದ್ಧ:ಅರುಣ್ ಕುಮಾರ್ ಪುತ್ತಿಲ: ಲೋಕ‌ ಕಲ್ಯಾಣಾರ್ಥವಾಗಿ ಶ್ರೀ ಸತ್ಯನಾರಾಯಣ ಪೂಜೆ-ಧಾರ್ಮಿಕ ಸಭೆ
  • ಜಾಲ್ಸೂರಿಗೆ ಆಗಮಿಸಿದ ಅರುಣ್ ಕುಮಾರ್ ಪುತ್ತಿಲ: ಅದ್ದೂರಿ ಸ್ವಾಗತ- ವೈಭವದ ಮೆರವಣಿಗೆ
  • ಮಾರ್ನಿಂಗ್ ಕ್ರಿಕೆಟ್‌ ಕ್ಲಬ್ ನೂತನ ಕಚೇರಿ ಉದ್ಘಾಟನೆ

ನಮ್ಮ ಬಗ್ಗೆ

ದಿ ಸುಳ್ಯ ಮಿರರ್ ಮಾಧ್ಯಮವು ಆಧುನಿಕ ಜಗತ್ತಿನ ವೇಗಕ್ಕೆ ಅನುಗುಣವಾಗಿ ಸುದ್ದಿಗಳನ್ನು ಅತ್ಯಂತ ವೇಗವಾಗಿ ಜನರಿಗೆ ತಲುಪಿಸುವ ಡಿಜಿಟಲ್ ಮಾಧ್ಯಮವಾಗಿದೆ. ಪತ್ರಕರ್ತ ಗಂಗಾಧರ ಕಲ್ಲಪಳ್ಳಿ ನೇತೃತ್ವದಲ್ಲಿ ಕ್ರಿಯಾಶೀಲ ಮತ್ತು ವೃತ್ತಿಪರ ಪತ್ರಕರ್ತರ ತಂಡ ಸುದ್ದಿಗಳನ್ನು ಅತ್ಯಂತ ಸರಳವಾಗಿ ಮತ್ತು ವೇಗವಾಗಿ ಮನ ಮುಟ್ಟುವಂತೆ ಧನಾತ್ಮಕ ದೃಷ್ಠಿಕೋನದಲ್ಲಿ ಜನರಿಗೆ ಮುಟ್ಟಿಸುವ ಕಾರ್ಯ ಮಾಡುತ್ತಿದೆ. ಜನಪರ, ಅಭಿವೃದ್ಧಿ ಪರ, ಪಾರದರ್ಶಕ ಮತ್ತು ಧನಾತ್ಮಕ ಪತ್ರಿಕೋದ್ಯಮ ನಮ್ಮ ಗುರಿ. ಜನರ ಆಶೋತ್ತರಗಳಿಗೆ ಧ್ವನಿಯಾಗುವ, ಸಮಸ್ಯೆಗಳಿಗೆ ಕನ್ನಡಿಯಾಗುವ ಆಶಯ ನಮ್ಮದು.ಗ್ರಾಮೀಣ ಭಾಗದಿಂದ ಆರಂಭಗೊಂಡು ಅಂತಾರಾಷ್ಟ್ರೀಯ ಮಟ್ಟದವರೆಗಿನ ಸುದ್ದಿಗಳ ಸಮೃದ್ಧಿಯ ಜೊತೆಗೆ, ವಿಶೇಷ ಲೇಖನಗಳು,ಮಾನವಸಾಕ್ತ ವರದಿಗಳು, ಹಿರಿಯ ಪತ್ರಕರ್ತರ, ಬರಹಗಾರರ ಅಂಕಣಗಳು ನಮ್ಮ ಮೀಡಿಯಾದಲ್ಲಿ ಓದುಗರನ್ನು ಮುಟ್ಟಲಿದೆ.

ಸಂಪರ್ಕಿಸಿ

ನಮ್ಮನ್ನು ಹೀಗೆ ಸಂಪರ್ಕಿಸಿ:

ಇ-ಮೇಲ್ ಐಡಿ: thesulliamirror@gmail.com
ದೂರವಾಣಿ ಸಂಖ್ಯೆ: 9008417480

ನಮ್ಮೊಂದಿಗೆ ಸಂಪರ್ಕದಲ್ಲಿರಿ

Facebook Twitter Whatsapp

2023 - Sullia Mirror. Website made with 🧡 by The Web People.

NEWS UPDATES ಪಡೆಯಲು ನಮ್ಮ ಗುಂಪಿನ ಕೊಂಡಿ

NEWS UPDATES ಪಡೆಯಲು ನಮ್ಮ ಗುಂಪಿನ ಕೊಂಡಿ